ಗದಗ: ‘ಸಚಿವ ಸ್ಥಾನ ಕೈತಪ್ಪಿರುವುದಕ್ಕೆ ಅಸಮಾಧಾನ ಇಲ್ಲ. ಎರಡನೇ ಪಟ್ಟಿಯಲ್ಲಿ ಸ್ಥಾನ ಸಿಗಬಹುದು ಎಂಬ ನಿರೀಕ್ಷೆಯೂ ಇಲ್ಲ; ಆ ಬಗ್ಗೆ ಟಿಪ್ಪಣಿಯನ್ನೂ ಮಾಡುವುದಿಲ್ಲ’ ಎಂದು ಶಾಸಕ ಎಚ್.ಕೆ ಪಾಟೀಲ ಸೋಮವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಹೇಳಿದರು.
‘ಸಚಿವ ಸ್ಥಾನ ಹಂಚಿಕೆಯು ಸೂಕ್ಷ್ಮ ಹಾಗೂ ಮಹತ್ವದ ವಿಚಾರ. ಪ್ರತಿಭಟನೆ, ಒತ್ತಡದ ಮೂಲಕ ಮಂತ್ರಿ ಸ್ಥಾನ ಪಡೆಯುವ ಸಂಸ್ಕೃತಿ ನಮ್ಮದಲ್ಲ. ನಾನೆಂದೂ ಅದನ್ನು ಕೇಳಿ ಪಡೆದಿಲ್ಲ. ಯಾಕೆ ಕೊಟ್ಟಿಲ್ಲ ಎನ್ನುವುದನ್ನು, ಆ ಕುರಿತು ನಿರ್ಧಾರ ತೆಗೆದುಕೊಂಡ ಪಕ್ಷದ ವರಿಷ್ಠರೇ ಉತ್ತರಿಸಬೇಕು. ಕ್ಷೇತ್ರದ ಜನ ಮಂತ್ರಿ ಸ್ಥಾನಕ್ಕಿಂತಲೂ ಮಿಗಿಲಾದ ಸ್ಥಾನದಲ್ಲಿ ನನ್ನನ್ನು ನೋಡುತ್ತಿದ್ದಾರೆ’ ಎಂದರು.
ಸಚಿವ ಸ್ಥಾನ ನೀಡುವಂತೆ ತಮ್ಮ ಪರ ಹೋರಾಟ ಮಾಡಿ, ಕಾಂಗ್ರೆಸ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಸ್ಥಳೀಯ ಸಂಸ್ಥೆಗಳ ಮುಖಂಡರು ಕೂಡಲೇ ರಾಜೀನಾಮೆ ವಾಪಸ್ ಪಡೆಯಬೇಕು ಎಂದ ಅವರು ಹೇಳಿದರು.
ಈ ರೀತಿಯ ಪ್ರತಿಭಟನೆ, ಒತ್ತಡ ಹಾಕುವುದು ಪಕ್ಷದ ಹಿತದೃಷ್ಟಿಯಿಂದಲೂ ಒಳ್ಳೆಯದಲ್ಲ ಎಂದು ಪಾಟೀಲ ಅಭಿಪ್ರಾಯಪಟ್ಟರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.