ಬೆಂಗಳೂರು: ‘ವಿಧಾನಸಭಾ ಚುನಾ ವಣೆಗೆ ಸ್ಪರ್ಧಿಸಲು ಕೋಲಾರ ಸೇರಿದಂತೆ ರಾಜ್ಯದ 20 ಕ್ಷೇತ್ರಗಳಿಂದ ಆಹ್ವಾನವಿದೆ. ಈ ವಿಷಯದಲ್ಲಿ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.
‘ಕೋಲಾರ ಜನರು ಪ್ರೀತಿಯಿಂದ ಕರೆಯುತ್ತಿದ್ದಾರೆ.ಸ್ಪರ್ಧಿಸುವ ವಿಚಾರದಲ್ಲಿ ಹೈಕಮಾಂಡ್ ನಿರ್ದೇಶನ ನೀಡಿಲ್ಲ. ಅವರು ತೆಗೆದುಕೊಳ್ಳುವ ಅಂತಿಮ ತೀರ್ಮಾನದಂತೆ ಕ್ಷೇತ್ರ ಆಯ್ಕೆಮಾಡಿಕೊಳ್ಳುವೆ’ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.