ADVERTISEMENT

22ಕ್ಕೆ ಕಾವೇರಿ ಜಲವಿವಾದ ತೀರ್ಪಿನ ಚರ್ಚೆ

​ಪ್ರಜಾವಾಣಿ ವಾರ್ತೆ
Published 16 ಮಾರ್ಚ್ 2018, 19:30 IST
Last Updated 16 ಮಾರ್ಚ್ 2018, 19:30 IST

ನವದೆಹಲಿ: ಕಾವೇರಿ ಜಲವಿವಾದ ಕುರಿತಂತೆ ಸುಪ್ರೀಂ ಕೋರ್ಟ್‌ ಇತ್ತೀಚೆಗೆ ನೀಡಿರುವ ತೀರ್ಪಿನ ಕುರಿತು ಚರ್ಚಿಸಿ, ಸೂಕ್ತ ನಿರ್ಧಾರ ಕೈಗೊಳ್ಳುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಸಂಜೆ ಇಲ್ಲಿನ ಕರ್ನಾಟಕ ಭವನದಲ್ಲಿ ಆಯೋಜಿಸಿದ್ದ ಸರ್ವಪಕ್ಷಗಳ ಸಂಸದರ ಸಭೆಯನ್ನು ಇದೇ 22ಕ್ಕೆ ಮುಂದೂಡಲಾಗಿದೆ.

ಅಧಿವೇಶನದಲ್ಲಿ ಪಾಲ್ಗೊಂಡಿರುವ ಎಲ್ಲ ಸಂಸದರಿಗೆ ಸಭೆಯಲ್ಲಿ ಭಾಗವಹಿಸಲು ಆಗುವುದಿಲ್ಲ ಎಂಬ ಮಾಹಿತಿ ದೊರೆತಿದೆ. ಅದಕ್ಕಾಗಿ ಇದೇ 22ರಂದು ಬೆಂಗಳೂರಿನಲ್ಲಿ ಸಭೆ ಆಯೋಜಿಸಲು ನಿರ್ಧರಿಸಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT