ADVERTISEMENT

24ಕ್ಕೆ ರಾಜ್ಯ ಬಜೆಟ್

​ಪ್ರಜಾವಾಣಿ ವಾರ್ತೆ
Published 3 ಫೆಬ್ರುವರಿ 2011, 18:45 IST
Last Updated 3 ಫೆಬ್ರುವರಿ 2011, 18:45 IST


ಬೆಂಗಳೂರು: 2011-12ನೇ ಸಾಲಿನ ರಾಜ್ಯ ಬಜೆಟ್ ಅನ್ನು ಇದೇ 24ರಂದು ಮಂಡಿಸಲು ಸಂಪುಟ ಸಭೆ ಒಪ್ಪಿಗೆ ನೀಡಿದೆ. ಕೇಂದ್ರ ಬಜೆಟ್‌ಗೆ ಮುನ್ನವೇ ಈ ಸಲ ರಾಜ್ಯ ಬಜೆಟ್ ಮಂಡಿಸುತ್ತಿದ್ದು, ಒಟ್ಟು 15 ದಿನ ವಿಧಾನಮಂಡಲ ಕಲಾಪ ನಡೆಸಲು ನಿರ್ಧರಿಸಲಾಗಿದೆ. 24ರಂದು ಮಧ್ಯಾಹ್ನ 12ಕ್ಕೆ ಹಣಕಾಸು ಸಚಿವರೂ ಆದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬಜೆಟ್ ಮಂಡಿಸಲಿದ್ದಾರೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ವಿ.ಎಸ್.ಆಚಾರ್ಯ ಸುದ್ದಿಗಾರರಿಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.