ADVERTISEMENT

₹ 24 ಲಕ್ಷ ವಶ: ಒಬ್ಬನ ಬಂಧನ

ಹವಾಲಾ ಹಣ ಸಾಗಾಟ

​ಪ್ರಜಾವಾಣಿ ವಾರ್ತೆ
Published 18 ಮೇ 2019, 20:01 IST
Last Updated 18 ಮೇ 2019, 20:01 IST
   

ಮಂಗಳೂರು: ಹವಾಲಾ ಹಣ ಸಾಗಾಟದ ವಿರುದ್ಧ ಮಂಗಳೂರು ಪೊಲೀಸರು ಕಾರ್ಯಾಚರಣೆ ಮುಂದುವರಿಸಿದ್ದು, ಇಲ್ಲಿನ ರಥಬೀದಿಯಲ್ಲಿ ಶನಿವಾರ ಬೆಳಿಗ್ಗೆ ಒಬ್ಬನನ್ನು ಬಂಧಿಸಿ ₹24 ಲಕ್ಷ ನಗದು ವಶಪಡಿಸಿಕೊಂಡಿದ್ದಾರೆ.

ದಾವಣಗೆರೆ ನಿವಾಸಿ ಮಂಜುನಾಥ್ (51) ಬಂಧಿತ ಆರೋಪಿ. ಮಂಗಳೂರು ಉತ್ತರ (ಬಂದರು) ಠಾಣೆ ಪೊಲೀಸರು ಶನಿವಾರ ಬೆಳಿಗ್ಗೆ ಗಸ್ತು ತಿರುಗುತ್ತಿದ್ದರು. ಆಗ ರಥಬೀದಿಯಲ್ಲಿ ಸಂಶಯಾಸ್ಪದ ರೀತಿಯಲ್ಲಿ ನಡೆದು ಹೋಗುತ್ತಿದ್ದ ಈತನನ್ನು ವಶಕ್ಕೆ ಪಡೆಯಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT