ADVERTISEMENT

ಮೂರು ಚಿರತೆಗಳ ಕಳೇಬರ ಪತ್ತೆ: ವಿಷಪ್ರಾಶನ ಶಂಕೆ

​ಪ್ರಜಾವಾಣಿ ವಾರ್ತೆ
Published 9 ಸೆಪ್ಟೆಂಬರ್ 2019, 19:40 IST
Last Updated 9 ಸೆಪ್ಟೆಂಬರ್ 2019, 19:40 IST
ನಂಜನಗೂಡು ತಾಲ್ಲೂಕಿನ ಹಲ್ಲೆರೆ ಗ್ರಾಮದಲ್ಲಿ ಸೋಮವಾರ ಪತ್ತೆಯಾದ ಚಿರತೆಗಳ ಮೃತದೇಹಗಳು
ನಂಜನಗೂಡು ತಾಲ್ಲೂಕಿನ ಹಲ್ಲೆರೆ ಗ್ರಾಮದಲ್ಲಿ ಸೋಮವಾರ ಪತ್ತೆಯಾದ ಚಿರತೆಗಳ ಮೃತದೇಹಗಳು   

ನಂಜನಗೂಡು: ತಾಲ್ಲೂಕಿನ ಹಲ್ಲೆರೆ ಗ್ರಾಮದ ಸಾರ್ವಜನಿಕ ಆಸ್ಪತ್ರೆಯ ಹಿಂಭಾಗದ ಜಮೀನೊಂದರಲ್ಲಿ, ಐದು ವರ್ಷ ವಯಸ್ಸಿನ ಹೆಣ್ಣು ಚಿರತೆ ಹಾಗೂ ಐದು ತಿಂಗಳ ಎರಡು ಮರಿಗಳ ಮೃತದೇಹ ಸೋಮವಾರ ಪತ್ತೆಯಾಗಿವೆ.

ಮೇಲ್ನೋಟಕ್ಕೆ ದೇಹದ ಮೇಲೆ ಯಾವುದೇ ಗಾಯದ ಗುರುತು ಕಂಡು ಬಂದಿಲ್ಲ. ಮೂರೂ ಕಳೇಬರಗಳು 100 ಮೀಟರ್‌ ಅಂತರದಲ್ಲಿ ಪತ್ತೆಯಾಗಿದ್ದು, ವಿಷ ಹಾಕಿ ಕೊಂದಿರುವ ಶಂಕೆ ವ್ಯಕ್ತವಾಗಿದೆ.

ಚಿರತೆಗಳು ಶನಿವಾರ ಮೃತಪಟ್ಟಿರಬಹುದು ಎಂದು ಮರಣೋತ್ತರ ಪರೀಕ್ಷೆ ನಡೆಸಿರುವ ವೈದ್ಯರು ಅಂದಾಜಿಸಿದ್ದಾರೆ. ಮರಿಗಳಲ್ಲಿ ಒಂದು ಗಂಡು, ಮತ್ತೊಂದು ಹೆಣ್ಣು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.