ADVERTISEMENT

ಮೇಕೆದಾಟು ಪಾದಯಾತ್ರೆ: ಡಿ.ಕೆ. ಶಿವಕುಮಾರ್ ಸೇರಿ 38 ಮಂದಿ ವಿರುದ್ಧ ಪ್ರಕರಣ

​ಪ್ರಜಾವಾಣಿ ವಾರ್ತೆ
Published 28 ಫೆಬ್ರುವರಿ 2022, 10:28 IST
Last Updated 28 ಫೆಬ್ರುವರಿ 2022, 10:28 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ರಾಮನಗರ: ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿ ಪಾದಯಾತ್ರೆ ನಡೆಸಿದ 38 ಮಂದಿ ವಿರುದ್ಧ ರಾಮನಗರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಪ್ರಕರಣದಲ್ಲಿ‌ ಮೊದಲ ಆರೋಪಿಯಾಗಿಸಲಾಗಿದೆ. ನಂತರದಲ್ಲಿ‌ ವಿರೋಧ ಪಕ್ಷದ ನಾಯಕ‌ ಸಿದ್ದರಾಮಯ್ಯ, ಸಂಸದ ಡಿ.ಕೆ. ಸುರೇಶ್, ವಿಧಾನ ಪರಿಷತ್ ಸದಸ್ಯ ಎಸ್. ರವಿ, ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ, ಸಲೀಂ ಅಹಮ್ಮದ್, ಮೊಹಮ್ಮದ್ ನಲಪ್ಪಾಡ್ ಹ್ಯಾರಿಸ್, ಈಶ್ವರ ಖಂಡ್ರೆ, ರಾಮಲಿಂಗಾರೆಡ್ಡಿ, ಎಂ.ಬಿ.‌ ಪಾಟೀಲ, ಯು.ಟಿ. ಖಾದರ್, ಕೆ.ಎಚ್. ಮುನಿಯಪ್ಪ , ಚಿತ್ರ ನಟರಾದ ಸಾಧುಕೋಕಿಲ, ನೆನಪಿರಲಿ ಪ್ರೇಮ್ ಮತ್ತಿತರರ ವಿರುದ್ಧ ರಾಮನಗರದ ಐಜೂರು ಠಾಣೆ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT