ಬೆಂಗಳೂರು: ಬಿಜೆಪಿ ಎಸ್ಸಿ ಮೋರ್ಚಾದ ರಾಷ್ಟ್ರೀಯ ಘಟಕವನ್ನು ಪುನರ್ ರಚನೆ ಮಾಡಿದ್ದು, ಅದರಲ್ಲಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಸೇರಿ ರಾಜ್ಯದ ಆರು ಮಂದಿಗೆ ಅವಕಾಶ ನೀಡಲಾಗಿದೆ.
ರಾಷ್ಟ್ರೀಯ ಕಾರ್ಯಕಾರಿಣಿ ಕಾಯಂ ಆಹ್ವಾನಿತರು: ಗೋವಿಂದ ಕಾರಜೋಳ, ಸಚಿವರಾದ ಅರವಿಂದ ಲಿಂಬಾವಳಿ, ಪ್ರಭು ಚವ್ಹಾಣ, ಎಸ್.ಅಂಗಾರ. ವಿಶೇಷ ಆಹ್ವಾನಿತರು:ಡಿ.ಎಸ್.ವೀರಯ್ಯ ಮತ್ತು ವೆಂಕಟೇಶ ಮೌರ್ಯ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಬಿಜೆಪಿ ಪ್ರಕಟಣೆಯಲ್ಲಿ ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.