ADVERTISEMENT

ನಿಜಾಮುದ್ದೀನ್ ಜಮಾತ್‌ ಮಸೀದಿಗೆ ತೆರಳಿದ್ದರು ರಾಜ್ಯದ 54 ಜನ: ಶ್ರೀರಾಮುಲು

​ಪ್ರಜಾವಾಣಿ ವಾರ್ತೆ
Published 31 ಮಾರ್ಚ್ 2020, 11:54 IST
Last Updated 31 ಮಾರ್ಚ್ 2020, 11:54 IST
ಸಚಿವ ಶ್ರೀರಾಮುಲು
ಸಚಿವ ಶ್ರೀರಾಮುಲು   

ಬೆಂಗಳೂರು: ನಿಜಾಮುದ್ದೀನ್ ಜಮಾತ್ ಮಸೀದಿಯಲ್ಲಿ ಭಾಗವಹಿಸಿದ 26 ವ್ಯಕ್ತಿಗಳು ಬೀದರ್ ಜಿಲ್ಲೆಗೆ ಸೇರಿದವರಾಗಿದ್ದು, ಅವರನ್ನು ಈ ಕೂಡಲೇ ಕ್ವಾರಂಟೈನ್‌ ಮಾಡಲಾಗಿದೆ. ಉಳಿದವರ ಪತ್ತೆ ಹಚ್ಚುವ ಕಾರ್ಯವನ್ನು ಮುಂದುವರಿಸಲಾಗಿದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ನಿಜಾಮುದ್ದೀನ್ ಜಮಾತ್ ಮಸೀದಿಯಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ ಬಂದವರ ಸಂಖ್ಯೆ 54 ಎಂಬುದು ಖಚಿತವಾಗಿದೆ. ಇವರು ಬೆಂಗಳೂರು, ಬೀದರ್, ಗುಲ್ಬರ್ಗ, ಬಳ್ಳಾರಿ ಭಾಗದವರು ಎಂದು ತಿಳಿದು ಬಂದಿದೆ. ಈಗಾಗಲೇ 13 ಜನರನ್ನು ಪತ್ತೆ ಹಚ್ಚಿ ಅವರನ್ನು ಕ್ವಾರಂಟೈನ್‌ನಲ್ಲಿಡಲಾಗಿದೆ ಎಂದಿದ್ದಾರೆ.

ಕೋವಿಡ್-19 ಸೋಂಕು ತಪಾಸಣೆಗಾಗಿ ಕಫ ಪರೀಕ್ಷೆ ನಡೆಸಿದ್ದು, ಈಗ ವರದಿ ಋಣಾತ್ಮಕವಾಗಿದೆ. ಇದು ಸಮಾಧಾನದ ಸಂಗತಿ. ಉಳಿದವರನ್ನು ಪತ್ತೆ ಹಚ್ಚಲಾಗುತ್ತಿದೆ ಎಂದು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.