ADVERTISEMENT

ಕೇರಳ ಮಾದರಿಯಲ್ಲಿ ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರ ಕೊಲೆ; ದೀಪಕ್ ರಾವ್ ಕೊಲೆಯಲ್ಲಿ ಸಚಿವ ರಮಾನಾಥ್ ರೈ ಕೈವಾಡ: ಯಡಿಯೂರಪ್ಪ ಆರೋಪ

​ಪ್ರಜಾವಾಣಿ ವಾರ್ತೆ
Published 4 ಜನವರಿ 2018, 7:59 IST
Last Updated 4 ಜನವರಿ 2018, 7:59 IST
ಹೂವಿನಹಡಗಲಿ: ಬಿಜೆಪಿ ಪರಿವರ್ತನಾ ಯಾತ್ರೆಗೆ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಚಾಲನೆ. ಸಂಸದ ಬಿ.ಶ್ರೀರಾಮುಲು, ಪಕ್ಷದ ರಾಜ್ಯ ಉಸ್ತುವಾರಿ ಮುರಳೀಧರ್ ರಾವ್, ಶಾಸಕ ಸುರೇಶ್ ಬಾಬು, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ದೀನಾ ಮಂಜುನಾಥ್, ಮುಖಂಡರಾದ ರೇಣುಕಾಚಾರ್ಯ, ಚಂದ್ರ ನಾಯ್ಕ, ರವಿಕುಮಾರ, ಫಕೀರಪ್ಪ, ಜೆ.ಶಾಂತಾ, ಓದೋ ಗಂಗಪ್ಪ ಇದ್ದಾರೆ.
ಹೂವಿನಹಡಗಲಿ: ಬಿಜೆಪಿ ಪರಿವರ್ತನಾ ಯಾತ್ರೆಗೆ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಚಾಲನೆ. ಸಂಸದ ಬಿ.ಶ್ರೀರಾಮುಲು, ಪಕ್ಷದ ರಾಜ್ಯ ಉಸ್ತುವಾರಿ ಮುರಳೀಧರ್ ರಾವ್, ಶಾಸಕ ಸುರೇಶ್ ಬಾಬು, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ದೀನಾ ಮಂಜುನಾಥ್, ಮುಖಂಡರಾದ ರೇಣುಕಾಚಾರ್ಯ, ಚಂದ್ರ ನಾಯ್ಕ, ರವಿಕುಮಾರ, ಫಕೀರಪ್ಪ, ಜೆ.ಶಾಂತಾ, ಓದೋ ಗಂಗಪ್ಪ ಇದ್ದಾರೆ.   

ಹೂವಿನಹಡಗಲಿ: ಮಂಗಳೂರಿನಲ್ಲಿ ನಡೆದ ದೀಪಕ್ ರಾವ್ ಕೊಲೆಯಲ್ಲಿ ಅಲ್ಲಿನ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ್ ರೈ ಅವರ ಕೈವಾಡವಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆರೋಪ ಮಾಡಿದರು.

ಬಿಜೆಪಿ ಪರಿವರ್ತನಾ ಯಾತ್ರೆಗೂ ಮುನ್ನ ಗುರುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಹದಗೆಟ್ಟಿದೆ. ದೀಪಕ್ ರಾವ್ ಶವವನ್ನು ಅವರ ಮನೆಯವರಿಗೆ ಒಪ್ಪಿಸೋದು ಬಿಟ್ಟು, ಕಾಂಗ್ರೆಸ್ ನವರೇ ಮನೆಗೆ ತಲುಪಿಸಿದ್ದಾರೆ. ಮುಖ್ಯಮಂತ್ರಿ ಕೂಡ ಇದಕ್ಕೆ ಕಾರಣರು. ಕೇರಳ ಮಾದರಿಯಲ್ಲಿ ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರನ್ನು ಕೊಲೆ ಮಾಡಲಾಗುತ್ತಿದೆ. ಇದರ ಬಗ್ಗೆ ಶೀಘ್ರದಲ್ಲೇ ಚರ್ಚಿಸಿ ಹೋರಾಟ ನಡೆಸಲಾಗುವುದು ಎಂದು ಹೇಳಿದರು.

ADVERTISEMENT

ಯಾರೇ ಪ್ರಚೋದನಕಾರಿ ಭಾಷಣ ಮಾಡಿದರೆ ಅಂತಹವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಕಾನೂನು ಸುವ್ಯವಸ್ಥೆ ಹಾಳಾಗದಂತೆ ನೋಡಿಕೊಳ್ಳಬೇಕು‌. ಆದರೆ, ನೆಪ ಹೇಳುವುದು ಸರಿಯಲ್ಲ. ಇಂತಹ ಬೇಜವಾಬ್ದಾರಿ ಮುಖ್ಯಮಂತ್ರಿ ದೇಶದಲ್ಲಿ ಎಲ್ಲೂ ಇಲ್ಲ ಎಂದು ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.

ನೂರು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದೆ. ಎಲ್ಲಿ ಹೆಚ್ಚಿನ ಟಿಕೆಟ್ ಆಕಾಂಕ್ಷಿಗಳಿದ್ದಾರೆ ಅಂತಹ ಕಡೆ ಜನಾಭಿಪ್ರಾಯ ಪಡೆದು ಅಂತಿಮಗೊಳಿಸಲಾಗುವುದು ಎಂದರು.

ಕೂಡ್ಲಿಗಿ ಶಾಸಕ ನಾಗೇಂದ್ರ ಅವರು ಯಾವ ಪಕ್ಷಕ್ಕೆ ಬೇಕಾದರೂ ಹೋಗಬಹುದು. ಅದಕ್ಕೆ ಅವರು ಸ್ವತಂತ್ರರು. ನಾನು ಅವರ ಸಂಪರ್ಕದಲ್ಲಿಲ್ಲ ಎಂದು ಹೇಳಿದರು.

ಬೆಂಗಳೂರಿನ ಜಯನಗರದಲ್ಲಿ ಉದ್ಯಾನವನಕ್ಕೆ ಮೀಸಲಿಟ್ಟಿದ್ದ 2.39 ಎಕರೆ ಜಾಗವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಡಿನೋಟಿಫಿಕೇಶನ್ ಮಾಡಿದ್ದು ಸತ್ಯ. ಈ ಬಗ್ಗೆ ವಾರದಲ್ಲಿ ಆರೋಪ ಸಿದ್ಧಪಡಿಸಿ ಸಂಬಂಧಪಟ್ಟವರಿಗೆ ಸಲ್ಲಿಸಲಾಗುವುದು ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.