ADVERTISEMENT

ಬಿಜೆಪಿ ನಾಯಕರ ಪ್ರಚೋದನಾತ್ಮಕ ಹೇಳಿಕೆಯಿಂದ ಸಾಮರಸ್ಯ ಹಾಳಾಗುತ್ತಿದೆ: ಗೃಹ ಸಚಿವ ರಾಮಲಿಂಗರೆಡ್ಡಿ

​ಪ್ರಜಾವಾಣಿ ವಾರ್ತೆ
Published 5 ಜನವರಿ 2018, 15:54 IST
Last Updated 5 ಜನವರಿ 2018, 15:54 IST
ಬಿಜೆಪಿ ನಾಯಕರ ಪ್ರಚೋದನಾತ್ಮಕ ಹೇಳಿಕೆಯಿಂದ ಸಾಮರಸ್ಯ ಹಾಳಾಗುತ್ತಿದೆ: ಗೃಹ ಸಚಿವ ರಾಮಲಿಂಗರೆಡ್ಡಿ
ಬಿಜೆಪಿ ನಾಯಕರ ಪ್ರಚೋದನಾತ್ಮಕ ಹೇಳಿಕೆಯಿಂದ ಸಾಮರಸ್ಯ ಹಾಳಾಗುತ್ತಿದೆ: ಗೃಹ ಸಚಿವ ರಾಮಲಿಂಗರೆಡ್ಡಿ   

ಹುಬ್ಬಳ್ಳಿ: ಮಂಗಳೂರಿನಲ್ಲಿ ನಡೆದ ಘಟನೆಗೆ ಪೊಲೀಸರ ವೈಫಲ್ಯ ಕಾರಣವಲ್ಲ ಎಂದು ಗೃಹ ಸಚಿವ ರಾಮಲಿಂಗರೆಡ್ಡಿ ಹೇಳಿದರು.

ನಗರದಲ್ಲಿ ಶುಕ್ರವಾರ ಮಾಧ್ಯಮದವರ ಜತೆ ಮಾತನಾಡಿದ ಅವರು, ಬಿಜೆಪಿ ನಾಯಕರ ಪ್ರಚೋದನಾತ್ಮಕ ಹೇಳಿಕೆಯಿಂದ ಸಾಮರಸ್ಯ ಹಾಳಾಗುತ್ತಿದೆ ಎಂದು ಆಪಾದಿಸಿದರು.

‘ಮಂಗಳೂರಿನಲ್ಲಿ ನಡೆದ ಘಟನೆಗೆ ಪೊಲೀಸರು ಹಾಗೂ ಗುಪ್ತಚರ ಇಲಾಖೆಯ ವೈಫಲ್ಯ ಕಾರಣ ಅಲ್ಲ. ಅಲ್ಲಿರುವ ಪೊಲೀಸರು ಯಾವ ಪಕ್ಷಗಳಿಗೂ ಸೇರಿದವರಲ್ಲ. ಬಿಜೆಪಿ, ಪಿಎಫ್‌ಐ, ಶ್ರೀರಾಮ ಸೇನೆ, ಆರ್‌ಎಸ್‌ಎಸ್‌ ಸಂಘಟನೆಗಳ ವರ್ತನೆಯಿಂದ ಸಾಮರಸ್ಯ ಹಾಳಾಗುತ್ತಿದೆ’ ಎಂದು ಅವರು ಟೀಕಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.