ADVERTISEMENT

ಬಶೀರ್‌ ಮೇಲೆ ಹಲ್ಲೆ ಪ್ರಕರಣ: ಸಿಸಿಬಿ ಪೊಲೀಸರಿಂದ ನಾಲ್ಕು ಮಂದಿ ಬಂಧನ

​ಪ್ರಜಾವಾಣಿ ವಾರ್ತೆ
Published 6 ಜನವರಿ 2018, 6:40 IST
Last Updated 6 ಜನವರಿ 2018, 6:40 IST
ಬಶೀರ್‌ ಮೇಲೆ ಹಲ್ಲೆ ಪ್ರಕರಣ: ಸಿಸಿಬಿ ಪೊಲೀಸರಿಂದ ನಾಲ್ಕು ಮಂದಿ ಬಂಧನ
ಬಶೀರ್‌ ಮೇಲೆ ಹಲ್ಲೆ ಪ್ರಕರಣ: ಸಿಸಿಬಿ ಪೊಲೀಸರಿಂದ ನಾಲ್ಕು ಮಂದಿ ಬಂಧನ   

ಮಂಗಳೂರು: ದೀಪಕ್‌ ರಾವ್ ಹತ್ಯೆ ನಡೆದ ಬುಧವಾರ ರಾತ್ರಿ ಕೊಟ್ಟಾರ ಚೌಕಿ ಬಳಿ ಬಶೀರ್‌ ಹಲ್ಲೆಗೆ ಒಳಗಾಗಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ನಾಲ್ಕು ಜನರನ್ನು ಬಂಧಿಸಿದ್ದಾರೆ.

ಈ ನಾಲ್ವರು ಮತೀಯ ಗಲಭೆಗಳಲ್ಲಿ ಈ ಹಿಂದೆ ಭಾಗಿಯಾಗಿದ್ದರು ಎಂಬ ಮಾಹಿತಿ ದೊರೆತಿದೆ. ಶನಿವಾರ ಮಧ್ಯಾಹ್ನ ಈ ಸಂಬಂಧ ಪೊಲೀಸ್ ಕಮಿಷನರ್ ಅಧಿಕೃತವಾಗಿ ಪ್ರಕಟಿಸುವ ನಿರೀಕ್ಷೆ ಇದೆ.

ಈ ಮಧ್ಯೆ ಬಶೀರ್ ಅವರ ಸ್ಥಿತಿ ಗಂಭೀರವಾಗಿಯೇ ಇದೆ.

ADVERTISEMENT

ಕಾಟಿಪಳ್ಳದಲ್ಲಿ ಇದೇ 3ರಂದು ದೀಪಕ್ ರಾವ್ ಹತ್ಯೆ ನಡೆದಿತ್ತು. ಅದೇ ದಿನ ರಾತ್ರಿ ಮಂಗಳೂರಿನ ಕೊಟ್ಟಾರ ಚೌಕಿಯಲ್ಲಿ ಬಶೀರ್‌ ಮೇಲೆ ಹಲ್ಲೆ ನಡೆದಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.