ADVERTISEMENT

ಗುಂಡೇಟು ತಿಂದವರ ವಿಚಾರಣೆಗೆ ಕಾತರ

​ಪ್ರಜಾವಾಣಿ ವಾರ್ತೆ
Published 6 ಜನವರಿ 2018, 19:34 IST
Last Updated 6 ಜನವರಿ 2018, 19:34 IST

ಮಂಗಳೂರು: ದೀಪಕ್‌ ಕೊಲೆ ಪ್ರಕರಣದಲ್ಲಿ ತನಿಖಾ ತಂಡದ ವಶದಲ್ಲಿರುವ ಇಬ್ಬರ ವಿಚಾರಣೆಯಿಂದ ಮಹತ್ವದ ಮಾಹಿತಿ ಕಲೆಹಾಕಿರುವ ಪೊಲೀಸರು, ಗುಂಡೇಟು ತಿಂದು ಆಸ್ಪತ್ರೆಯಲ್ಲಿರುವ ಹಂತಕರಾದ ಪಿಂಕಿ ನವಾಝ್‌ ಮತ್ತು ರಿಜ್ವಾನ್‌ ವಿಚಾರಣೆಗೆ ಕಾತರದಿಂದ ಕಾಯುತ್ತಿದ್ದಾರೆ.

ದಡ್ಡಿಗುರಿಯಲ್ಲಿ ಪೊಲೀಸರು ನಡೆಸಿದ ಕಾರ್ಯಾಚರಣೆ ವೇಳೆ ಇಬ್ಬರ ಕಾಲಿಗೂ ಗುಂಡೇಟುಗಳು ಬಿದ್ದಿದ್ದವು. ಬಂಧನದ ಬಳಿಕ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಶಸ್ತ್ರಚಿಕಿತ್ಸೆ ನಡೆಸಿ ಗುಂಡುಗಳನ್ನು ಹೊರತೆಗೆಯಲಾಗಿದೆ.

ಶನಿವಾರ ಈ ಕುರಿತು ಪ್ರತಿಕ್ರಿಯಿಸಿದ ನಗರ ಪೊಲೀಸ್ ಕಮಿಷನರ್ ಟಿ.ಆರ್‌.ಸುರೇಶ್, ‘ಪಿಂಕಿ ನವಾಝ್‌ ಮತ್ತು ರಿಜ್ವಾನ್‌ರನ್ನು ಶನಿವಾರ ವಾರ್ಡ್‌ಗೆ ಸ್ಥಳಾಂತರ ಮಾಡಲಾಗಿದೆ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.