ADVERTISEMENT

ಬೆಳಗಾವಿ: ಕೇಂದ್ರ ಸಚಿವ ಅನಂತಕುಮಾರ ಹೆಗಡೆಗೆ ಕಪ್ಪು ಬಾವುಟ ಪ್ರದರ್ಶನ

​ಪ್ರಜಾವಾಣಿ ವಾರ್ತೆ
Published 8 ಜನವರಿ 2018, 7:14 IST
Last Updated 8 ಜನವರಿ 2018, 7:14 IST
ಬೆಳಗಾವಿ: ಕೇಂದ್ರ ಸಚಿವ ಅನಂತಕುಮಾರ ಹೆಗಡೆಗೆ ಕಪ್ಪು ಬಾವುಟ ಪ್ರದರ್ಶನ
ಬೆಳಗಾವಿ: ಕೇಂದ್ರ ಸಚಿವ ಅನಂತಕುಮಾರ ಹೆಗಡೆಗೆ ಕಪ್ಪು ಬಾವುಟ ಪ್ರದರ್ಶನ   

ಬೆಳಗಾವಿ: ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಲು ಆಗಮಿಸಿದ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಅವರಿಗೆ ದಲಿತ ಸಂಘಟನೆಗಳ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಿದರು.

ಸಂವಿಧಾನ ಬದಲಾವಣೆ ಹೇಳಿಕೆ ನೀಡಿದ ಉಡುಪಿ ಪೇಜಾವರ ವಿಶ್ವೇಶ ತೀರ್ಥ ಸ್ವಾಮೀಜಿ ಹಾಗೂ ಕೇಂದ್ರ ಸಚಿವ ಅನಂತ ಕುಮಾರ ಹೆಗಡೆ ಭಾವಚಿತ್ರಕ್ಕೆ ಚಪ್ಪಲಿ ಹಾರಹಾಕಿ ದಲಿತ ಸಂಘಟನೆಗಳ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

ಘಟನೆ ಸಂಬಂಧ ದಲಿತ ಮುಖಂಡರಾದ ಗಜು ಧರನಾಯಕ, ಮೋಹನ ಕಾಂಬಳೆ ಸೇರಿದಂತೆ 30ಕ್ಕೂ ಹೆಚ್ಚು ದಲಿತ ಸಂಘಟನೆಗಳ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.

ADVERTISEMENT

ಘಟನೆ ಬಳಿಕ ಚನ್ನಮ್ಮ ವೃತ್ತದ ಸುತ್ತಮುತ್ತ ಬಿಗಿ ಪೊಲೀಸ್‌ ಭದ್ರತೆಯನ್ನು ಕಲ್ಪಿಸಲಾಗಿದೆ. 

ಕನ್ನಡ ಸಾಹಿತ್ಯ ಭವನದಲ್ಲಿ ನಡೆಯುತ್ತಿರುವ ಬಿಜೆಪಿ ಬೂತ್ ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಮಾಧ್ಯಮದವರಿಗೆ ಪ್ರವೇಶ ನಿರಾಕರಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.