ಉಡುಪಿ: ಮನುಷ್ಯರೇ ಅಲ್ಲದ ಬಿಜೆಪಿ ಮುಖಂಡರಿಂದ ಹಿಂದುತ್ವದ ಪಾಠ ಕಲಿಯಬೇಕಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿಗೆ ತಿರುಗೇಟು ನೀಡಿದರು.
ಸೋಮವಾರ ಸಾಧನ ಸಮಾವೇಶದಲ್ಲಿ ಪಾಲ್ಗೊಳ್ಳಲು ಉಡುಪಿಯ ಬೈಂದೂರಿಗೆ ಬಂದ ಅವರು ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದರು.
‘ನಾವು ಹಿಂದೂಗಳು ಅದರಲ್ಲೂ ಮನುಷ್ಯತ್ವ ಇರುವ ಹಿಂದೂಗಳು. ಗೋಡ್ಸೆ ಆರಾಧಕರು ನಮಗೆ ಹಿಂದುತ್ವದ ಪಾಠ ಮಾಡುವುದು ಬೇಡ’ ಎಂದು ವಾಗ್ದಾಳಿ ನಡೆಸಿದರು.
‘ಕೋಮು ಗಲಭೆಗಳಿಗೆ ಸಂಘ ಪರಿವಾರದ ಸಂಘಟನೆಗಳೇ ಕಾರಣ ಎಂದು ಆರೋಪಿಸಿದ ಅವರು, ಪಿಎಫ್ಐ, ಬಜರಂಗದಳ ಸಂಘಟನೆ ಮೇಲೆ ನಿಗಾ ಇಡಲು ಸೂಚನೆ ನೀಡಿದ್ದೇನೆ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.