ADVERTISEMENT

ರಾಜ್ಯಕ್ಕೆ ಷಾ ಬಂದು ಹೋದ ಮೇಲೆ ಗಲಭೆಗಳು ಹೆಚ್ಚಾಗಿವೆ: ಸಾರಿಗೆ ಸಚಿವ ರೇವಣ್ಣ ಆರೋಪ

​ಪ್ರಜಾವಾಣಿ ವಾರ್ತೆ
Published 9 ಜನವರಿ 2018, 11:31 IST
Last Updated 9 ಜನವರಿ 2018, 11:31 IST
ರಾಜ್ಯಕ್ಕೆ ಷಾ ಬಂದು ಹೋದ ಮೇಲೆ ಗಲಭೆಗಳು ಹೆಚ್ಚಾಗಿವೆ: ಸಾರಿಗೆ ಸಚಿವ ರೇವಣ್ಣ ಆರೋಪ
ರಾಜ್ಯಕ್ಕೆ ಷಾ ಬಂದು ಹೋದ ಮೇಲೆ ಗಲಭೆಗಳು ಹೆಚ್ಚಾಗಿವೆ: ಸಾರಿಗೆ ಸಚಿವ ರೇವಣ್ಣ ಆರೋಪ   

ರಾಯಚೂರು: ‘ರಾಜ್ಯಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತಾ ಷಾ ಬಂದು ಹೋದ ಬಳಿಕ ಕೋಮು ಗಲಭೆಗಳು ಹೆಚ್ಚಾಗಿವೆ. ಮೌನವಾಗಿದ್ದ ಕೆಲವು ಬಿಜೆಪಿ ನಾಯಕರು ಬಾಯಿಗೆ ಬಂದಂತೆ ಮಾತನಾಡಿ ಪ್ರಚೋದನೆ ನೀಡುತ್ತಿದ್ದಾರೆ’ ಎಂದು ಸಾರಿಗೆ ಸಚಿವ ಎಚ್‌.ಎಂ. ರೇವಣ್ಣ ಆರೋಪಿಸಿದರು.

ನಗರದಲ್ಲಿ ಹಡಪದ ಸಮಾಜದಿಂದ ಮಂಗಳವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಪೂರ್ವ ಸುದ್ದಿಗಾರರೊಂದಿಗೆ ಮಾತನಾಡಿದರು.

‘ಸಂಸದರಾದ ಅನಂತಕುಮಾರ್‌, ಪ್ರತಾಪ್‌ ಸಿಂಹ ಹಾಗೂ ಶೋಭಾ ಕರಂದ್ಲಾಜೆ ಈಗ ಹೆಚ್ಚಾಗಿ ಮಾತನಾಡುತ್ತಿದ್ದಾರೆ. ರಾಜ್ಯದಲ್ಲಿ ಯಾರೇ ಸತ್ತರು, ಅವರನ್ನು ಬಿಜೆಪಿಯವರು ಎಂದು ಬಿಂಬಿಸುತ್ತಿದ್ದಾರೆ. ಆದರೆ, ಕಾಂಗ್ರೆಸ್‌ ಪಕ್ಷವು ಸಾವಿನ ಮನೆಯಲ್ಲಿ ರಾಜಕಾರಣ ಮಾಡುವುದಿಲ್ಲ’ ಎಂದರು.

ADVERTISEMENT

‘ನಾವೂ ಹಿಂದುಗಳೇ; ಆದರೆ ಮತ್ತೊಂದು ಸಮಾಜವನ್ನು ದ್ವೇಷಿಸುವ ಹಿಂದುಗಳಲ್ಲ. ಒಕ್ಕೂಟದಲ್ಲಿ ರಾಷ್ಟ್ರೀಯ ನಾಯಕರು ರಾಜ್ಯಗಳಿಗೆ ಭೇಟಿ ನೀಡುವುದು ಸಹಜ. ಆದರೆ, ಅಮಿತಾ ಷಾ ಅವರು ಮಹತ್ವಾಕಾಂಕ್ಷೆ ಇಟ್ಟುಕೊಂಡು ಬರುತ್ತಿದ್ದಾರೆ. ಇವರ ತಂತ್ರಗಾರಿಕೆ ರಾಜ್ಯದಲ್ಲಿ ನಡೆಯುವುದಿಲ್ಲ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.