ಕೊಪ್ಪಳ: ವಿಜಯಪುರದಲ್ಲಿ ದಲಿತ ಬಾಲಕಿಯ ಅತ್ಯಾಚಾರ, ಹತ್ಯೆ, ಸಂವಿಧಾನ ವಿರೋಧಿ ಹೇಳಿಕೆ, ಕೋರೆಗಾಂವ್ ದಿನಾಚರಣೆ ವೇಳೆ ನಡೆದ ಹಿಂಸಾಚಾರ ಖಂಡಿಸಿ ನಗರದಲ್ಲಿ ಬುಧವಾರ ಸ್ವಯಂಪ್ರೇರಿತ ಬಂದ್ ನಡೆದಿದೆ.
ಬಾಲಕಿಯ ಅತ್ಯಾಚಾರ ವಿರೋಧಿ ಸಮಿತಿ ಸೇರಿದಂತೆ ಹಲವು ಸಂಘಟನೆಗಳು ಬಂದ್ ಗೆ ಕರೆ ನೀಡಿದ್ದವು. ನಗರದಲ್ಲಿ ಅಂಗಡಿ, ವ್ಯಾಪಾರ ಮಳಿಗೆಗಳು ಬಂದ್ ಆಗಿವೆ. ಬಸ್ ಸಂಚಾರ ಸ್ಥಗಿತಗೊಂಡಿದೆ. ಬ್ಯಾಂಕ್ ಗಳು ತೆರೆದಿವೆ. ಆಟೋರಿಕ್ಷಾ, ಖಾಸಗಿ ವಾಹನ ಸಂಚಾರ, ಜನರ ಓಡಾಟ ಎಂದಿನಂತೆ ಇದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.