ADVERTISEMENT

ಸಚಿವ ತನ್ವೀರ್ ಸೇಠ್‌ಗೆ ಬೆದರಿಕೆ ಕರೆ: ₹ 10 ಕೋಟಿಗೆ ಬೇಡಿಕೆ

​ಪ್ರಜಾವಾಣಿ ವಾರ್ತೆ
Published 10 ಜನವರಿ 2018, 6:08 IST
Last Updated 10 ಜನವರಿ 2018, 6:08 IST
ತನ್ವೀರ್ ಸೇಠ್‌ (ಸಂಗ್ರಹ ಚಿತ್ರ)
ತನ್ವೀರ್ ಸೇಠ್‌ (ಸಂಗ್ರಹ ಚಿತ್ರ)   

ಬೆಂಗಳೂರು: ಶಿಕ್ಷಣ ಸಚಿವ ತನ್ವೀರ್ ಸೇಠ್ ಅವರಿಗೆ ಜೀವ ಬೆದರಿಕೆ ಕರೆ ಬಂದಿದ್ದು, ₹ 10 ಕೋಟಿಗೆ ಬೇಡಿಕೆ ಇಡಲಾಗಿದೆ.

ಹಣ ನೀಡದಿದ್ದರೆ ಗುಂಡಿಕ್ಕಿ ಕೊಲೆ ಮಾಡುವುದಾಗಿ ಕರೆ ಮಾಡಿದವರು ಬೆದರಿಕೆಯೊಡ್ಡಿದ್ದಾರೆ. ಭೂಗತ ಪಾತಕಿ ರವಿ ಪೂಜಾರಿ ಕಡೆಯವರಿಂದ ಕರೆ ಬಂದಿದೆ ಎಂದು ಆರೋಪಿಸಲಾಗಿದೆ.

ಈ ಕುರಿತು ಸಚಿವರು ಪೊಲೀಸ್ ಮಹಾನಿರ್ದೇಶಕರಿಗೆ ದೂರು ನೀಡಿದ್ದಾರೆ. ಅಲ್ಲದೆ, ತಮಗೆ ಹೆಚ್ಚಿನ ಭದ್ರತೆ ಒದಗಿಸುವಂತೆ ಗೃಹ ಸಚಿವ ರಾಮಲಿಂಗ ರೆಡ್ಡಿ ಅವರಿಗೆ ಮನವಿ ಮಾಡಿದ್ದಾರೆ ಎಂದು ನ್ಯೂಸ್‌ 18 ವೆಬ್‌ಸೈಟ್ ಟ್ವೀಟ್ ಮಾಡಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.