ಚಿತ್ರದುರ್ಗ: ಇಲ್ಲಿನ ಪಂಚಾಚಾರ್ಯ ಕಲ್ಯಾಣ ಮಂಟಪದಲ್ಲಿ ಕೆಪಿಸಿಸಿ ಚುನಾವಣಾ ಪ್ರಣಾಳಿಕಾ ಸಮಿತಿ ಸಭೆ ಆರಂಭಗೊಂಡಿದೆ. ಸಮಿತಿ ಅಧ್ಯಕ್ಷ ಎಂ. ವೀರಪ್ಪ ಮೊಯಿಲಿ ಸಭೆ ಉದ್ಘಾಟಿಸಿದರು.
ಸಮಿತಿ ಸದಸ್ಯ ವಿ. ಆರ್. ಸುದರ್ಶನ್ ಪ್ರಾಸ್ತಾವಿಕ ಮಾತುಗಳನ್ನಾಡಿ ಸಭೆಯ ಉದ್ದೇಶದ ಬಗ್ಗೆ ವಿವರಣೆ ನೀಡಿದರು.
ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಟಿ.ಬಿ.ಜಯಚಂದ್ರ, ಬಳ್ಳಾರಿಯಿಂದ ಕೆ.ಸಿ.ಕೊಂಡಯ್ಯ, ತುಮಕೂರು, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಸಭೆಯಲ್ಲಿ ಭಾಗಿಯಾಗಿದ್ದಾರೆ. ಮೈಸೂರು ಜಿ.ಪಂ.ನ ಮಾಜಿ ಅಧ್ಯಕ್ಷೆ ಪುಷ್ಪ, ಪ್ರಣಾಳಿಕೆ ಸದಸ್ಯ ನಂಜಯ್ಯಮಠ ಸಹ ಸಭೆಯಲ್ಲಿ ಹಾಜರಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.