ಬೆಂಗಳೂರು: ರಾಜ್ಯದ ಮುಖ್ಯ ಕಾರ್ಯದರ್ಶಿ ಕೆ.ರತ್ನಪ್ರಭಾ ಅವರಿಗೆ ಅಭಿನಂದನೆಗಳ ಮಹಾಪೂರ ಹರಿದು ಬರುತ್ತಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಅವರು ‘ಬಹಳಷ್ಟು ಪ್ರಶಸ್ತಿಪತ್ರ, ಪದಕಗಳು ಕಪಾಟಿನಲ್ಲಿ ಭದ್ರವಾಗಿವೆ. ಆದರೆ, ಪ್ರಧಾನಿ ನೀಡಿದ ಈ ಪ್ರಶಂಸೆ ಎಂದೆಂದಿಗೂ ಮನಸ್ಸಿನಲ್ಲಿ ಉಳಿಯಲಿದೆ’ ಎಂದು ಟ್ವೀಟಿಸಿದ್ದಾರೆ.
ಉನ್ನತ ಮಟ್ಟದ ಅಧಿಕಾರಿಗಳ ಸಮಾವೇಶದಲ್ಲಿ ರಾಜ್ಯದ ಮುಖ್ಯ ಕಾರ್ಯದರ್ಶಿ ಕೆ.ರತ್ನಪ್ರಭಾ ಅವರ ಟ್ವೀಟ್ ಪ್ರಸ್ತಾಪಿಸಿ ಪ್ರಧಾನಿ ಮೋದಿ ಮೆಚ್ಚುಗೆಯ ಮಾತುಗಳನ್ನು ಆಡಿದ್ದರು. ಇದಾದ ಬಳಿಕ ರತ್ನಪ್ರಭಾ ಅವರಿಗೆ ಟ್ವಿಟರ್ ಮೂಲಕ ಹಾಗೂ ನೇರವಾಗಿ ಸಾಕಷ್ಟು ಜನರು ಅಭಿನಂದನೆ ಸಲ್ಲಿಸುವ ಜತೆಗೆ ಹಿಂದಿನ ಕಾರ್ಯಗಳನ್ನು ನೆನಪಿಸಿ ಧನ್ಯವಾದವನ್ನೂ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.