ADVERTISEMENT

ಧಾರವಾಡದಲ್ಲಿ ಅಗ್ನಿ ಆಕಸ್ಮಿಕ: ಭತ್ತದ ಬಣವೆಗಳಿಗೆ ಹಾನಿ

​ಪ್ರಜಾವಾಣಿ ವಾರ್ತೆ
Published 10 ಜನವರಿ 2018, 12:51 IST
Last Updated 10 ಜನವರಿ 2018, 12:51 IST
ಧಾರವಾಡದಲ್ಲಿ ಅಗ್ನಿ ಆಕಸ್ಮಿಕ: ಭತ್ತದ ಬಣವೆಗಳಿಗೆ ಹಾನಿ
ಧಾರವಾಡದಲ್ಲಿ ಅಗ್ನಿ ಆಕಸ್ಮಿಕ: ಭತ್ತದ ಬಣವೆಗಳಿಗೆ ಹಾನಿ   

ಧಾರವಾಡ: ಅಳ್ನಾವರ ಸಮೀಪದ ಕುಂಬಾರಕೊಪ್ಪ ಬಳಿಯ ಸಿಂಗನಕೊಪ್ಪ ಗ್ರಾಮದಲ್ಲಿ ಬುಧವಾರ ಅಗ್ನಿ ಆಕಸ್ಮಿಕ ಸಂಭವಿಸಿದ್ದು ಭತ್ತದ 2 ಬಣವೆಗಳು ಸಂಪೂರ್ಣ ಸುಟ್ಟು ಹೋಗಿವೆ. 

ಬೆಂಕಿಯ ಕೆನ್ನಾಲಿಗೆ ಪಕ್ಕದಲ್ಲಿದ್ದ ಮನೆಗೂ ವ್ಯಾಪಿಸಿದ್ದರಿಂದ ಭಾಗಶಃ ಸುಟ್ಟಿದೆ.

ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿ ಅನಾಹುತ ತಪ್ಪಿಸಿದ್ದಾರೆ.

ADVERTISEMENT

ಬೆಂಕಿ ಕಾಣಿಸಿಕೊಂಡ ತಕ್ಷಣ ಗ್ರಾಮಸ್ಥರು ಕೊಡಗಳಲ್ಲಿ ನೀರು ತಂದು ಹಾಕಿ ಬೆಂಕಿ ಆರಿಸಲು ಪ್ರಯತ್ನಿಸಿದ್ದಾರೆ. ಅಲ್ಲಿ ಒಟ್ಟು 5 ಬಣವೆಗಳು ಇದ್ದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.