ADVERTISEMENT

ಮತ್ತೆ ಮೂರು ಪ್ರಕರಣ ದಾಖಲಿಸಲು ಕ್ರಮ

ಮೂಡಿಗೆರೆ ವಿದ್ಯಾರ್ಥಿನಿ ಧನ್ಯಶ್ರೀ ಆತ್ಮಹತ್ಯೆ ಪ್ರಕರಣ

​ಪ್ರಜಾವಾಣಿ ವಾರ್ತೆ
Published 10 ಜನವರಿ 2018, 19:30 IST
Last Updated 10 ಜನವರಿ 2018, 19:30 IST
ಮತ್ತೆ ಮೂರು ಪ್ರಕರಣ ದಾಖಲಿಸಲು ಕ್ರಮ
ಮತ್ತೆ ಮೂರು ಪ್ರಕರಣ ದಾಖಲಿಸಲು ಕ್ರಮ   

ಚಿಕ್ಕಮಗಳೂರು: ಮೂಡಿಗೆರೆಯ ವಿದ್ಯಾರ್ಥಿನಿ ಧನ್ಯಶ್ರೀ ಆತ್ಮಹತ್ಯೆ ಪ್ರಕರಣದ ತನಿಖೆ ಚುರುಕುಗೊಳಿಸಲಾಗಿದ್ದು, ಧನ್ಯಶ್ರೀ ತಂದೆ ಯಾದವ ಸುವರ್ಣ ಅವರಿಗೆ ಕೆಲವರು ಒತ್ತಡ ಹೇರಿ ಪೊಲೀಸರಿಗೆ ತಪ್ಪು ಮಾಹಿತಿ ನೀಡುವಂತೆ ಮಾಡಿರುವುದು ಗೊತ್ತಾಗಿದೆ.

‘ತಪ್ಪು ಮಾಹಿತಿ ನೀಡುವಂತೆ ಮಾಡಿದ ಕೆಲ ಸಂಘಟನೆಗಳ ಯುವಕರನ್ನು ಗುರುತಿಸಿದ್ದು, ಅವರ ವಿರುದ್ಧ  ಪ್ರಕರಣ ದಾಖಲಿಸಲಾಗುವುದು’ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೆ.ಅಣ್ಣಾಮಲೈ ಇಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘ಸುಳ್ಳು ಮಾಹಿತಿ ಕೊಡಿಸಿ, ತನಿಖೆ ದಾರಿ ತಪ್ಪಿಸಲು ಯತ್ನಿಸಿದ್ದಕ್ಕೆ ಸಂಬಂಧಿಸಿದಂತೆ ಸಾಕ್ಷ್ಯಗಳು ಲಭ್ಯವಾಗಿವೆ. ಸಂಘಟನೆಗಳ ಯುವಕರ ವಿರುದ್ಧ  ಪ್ರಕರಣ ದಾಖಲಿಸಿ, ಕ್ರಮ ಜರುಗಿಸಲಾಗುವುದು’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.