ADVERTISEMENT

ಉದ್ಯೋಗಕ್ಕೆ ಓಟು ಆಂದೋಲನದ ರಾಷ್ಟೀಯ ಸಂಚಾಲಕ ಚಂದ್ರ ಮಿಶ್ರ ಮೇಲೆ ಕಾಂಗ್ರೆಸ್ ಕಾರ್ಯಕರ್ತರಿಂದ ಹಲ್ಲೆ

​ಪ್ರಜಾವಾಣಿ ವಾರ್ತೆ
Published 11 ಜನವರಿ 2018, 6:37 IST
Last Updated 11 ಜನವರಿ 2018, 6:37 IST
ಚಂದ್ರ ಮಿಶ್ರ ಅವರ ಮೂಗು ಹಾಗೂ ಬಾಯಿಯಿಂದ ರಕ್ತ ವಸರುವಂತೆ ಹಲ್ಲೆ ನಡೆಸಿದ್ದಾರೆ.
ಚಂದ್ರ ಮಿಶ್ರ ಅವರ ಮೂಗು ಹಾಗೂ ಬಾಯಿಯಿಂದ ರಕ್ತ ವಸರುವಂತೆ ಹಲ್ಲೆ ನಡೆಸಿದ್ದಾರೆ.   

ಮೈಸೂರು: 'ಉದ್ಯೋಗಕ್ಕೆ ಓಟು ಆಂದೋಲನ' (ನೋ ಜಾಬ್ ನೋ ವೋಟ್) ಅಭಿಯಾನದ ರಾಷ್ಟೀಯ ಸಂಚಾಲಕ ಚಂದ್ರ ಮಿಶ್ರ ಎಂಬುವರ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಗುರುವಾರ ಹಲ್ಲೆ ನಡೆಸಿದ್ದಾರೆ.

ಇಲ್ಲಿನ ಸ್ವಾತಂತ್ರ್ಯ ಹೋರಾಟಗಾರರ ಉದ್ಯಾನದ ಬಳಿ ಈ ದಾಳಿ ನಡೆದಿದೆ. ಪಾಲಿಕೆ ಸದಸ್ಯ ಪ್ರಶಾಂತ್ ಗೌಡ ಹಾಗೂ ಅವರ ಬೆಂಬಲಿಗರು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಬೆಳಿಗ್ಗೆ 10ರ ಸುಮಾರಿಗೆ ಅಭಿಯಾನದ ಸದಸ್ಯರೊಂದಿಗೆ ಪ್ರಚಾರ ಕೈಗೊಂಡಾಗ ಸ್ಥಳಕ್ಕೆ ಧಾವಿಸಿದ ಕಾಂಗ್ರೆಸ್ ಕಾರ್ಯಕರ್ತರು ಗಲಾಟೆ ನಡೆಸಿದ್ದಾರೆ. ಚಂದ್ರ ಮಿಶ್ರ ಅವರ ಮೂಗು ಹಾಗೂ ಬಾಯಿಯಿಂದ ರಕ್ತ ವಸರುವಂತೆ ಹಲ್ಲೆ ನಡೆಸಿದ್ದಾರೆ.

ADVERTISEMENT

ಈ ಸಂಬಂಧ ಲಕ್ಷ್ಮಿಪುರಂ ಠಾಣೆಯ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿನಿಧಿಸುವ ವರುಣ ವಿಧಾನಸಭೆ ಕ್ಷೇತ್ರದಲ್ಲಿ ಅಭಿಯಾನ ನಡೆಸಲು ಉದ್ದೇಶಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.