ADVERTISEMENT

18 ಗಂಟೆ ಬಳಿಕ ಹೆದ್ದಾರಿ ತೆರವು

​ಪ್ರಜಾವಾಣಿ ವಾರ್ತೆ
Published 11 ಜನವರಿ 2018, 19:30 IST
Last Updated 11 ಜನವರಿ 2018, 19:30 IST

ಉಪ್ಪಿನಂಗಡಿ: ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಶಿರಾಡಿ ಗ್ರಾಮದ ಅಡ್ಡಹೊಳೆ ಬಳಿ ಬುಧವಾರ ಸಂಜೆ ಮಗುಚಿ ಬಿದ್ದು ಗ್ಯಾಸ್‌ ಸೋರಿಕೆಯಾಗುತ್ತಿದ್ದ ಎಲ್‌ಪಿಜಿ ಟ್ಯಾಂಕರ್‌ ಅನ್ನು ಗುರುವಾರ ಬೆಳಿಗ್ಗೆ 9ಗಂಟೆ ವೇಳೆಗೆ ತೆರವುಗೊಳಿಸಲಾಯಿತು.

ಈ ಘಟನೆಯಿಂದಾಗಿ 18 ಗಂಟೆಗಳ ಕಾಲ ಹೆದ್ದಾರಿಯಲ್ಲಿ ವಾಹನ ಸಂಚಾರವನ್ನು ಸ್ಥಗಿತಗೊಳಿಸಿ ಬದಲಿ ಮಾರ್ಗಗಳಲ್ಲಿ ವಾಹನ ಸಾಗಲು ಅವಕಾಶ ಕಲ್ಪಿಸಲಾಗಿತ್ತು. ಬೇರೆ ಟ್ಯಾಂಕರ್‌ಗೆ ಗ್ಯಾಸ್‌ ವರ್ಗಾಯಿಸುವ ವೇಳೆ ಅಪಾಯ ಸಂಭವಿಸಬಾರದು ಎಂಬ ಕಾರಣಕ್ಕೆ ವಾಹನ ಸಂಚಾರಕ್ಕೆ ತಡೆ ಒಡ್ಡಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT