ಮಂಡ್ಯ: ಶ್ರೀರಂಗಪಟ್ಟಣದಲ್ಲಿ ಶುಕ್ರವಾರ ನಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಾಧನಾ ಸಂಭ್ರಮಕ್ಕೆ ಜನರನ್ನು ಸೆಳೆಯಲು ಶಾಸಕ ರಮೇಶ್ಬಾಬು ಬಂಡಿಸಿದ್ದೇಗೌಡ ಬೆಳ್ಳಿನಾಣ್ಯ ಹಾಗೂ ಹಣ ವಿತರಣೆ ಮಾಡಿರುವ ವಿಷಯ ಬೆಳಕಿಗೆ ಬಂದಿದೆ.
‘ಜೆಡಿಎಸ್ನಿಂದ ಬಂಡಾಯ ಎದ್ದು ಕಾಂಗ್ರೆಸ್ನಲ್ಲಿ ಟಿಕೆಟ್ ಆಕಾಂಕ್ಷಿಯಾಗಿರುವ ರಮೇಶ್ಬಾಬು ಅವರಿಗೆ ಈ ಸಂಭ್ರಮ ಶಕ್ತಿ ಪ್ರದರ್ಶನವೂ ಆಗಿತ್ತು. ಹಳ್ಳಿಗಳಿಂದ ಜನರನ್ನು ಕರೆದುಕೊಂಡು ಬರುವ ಮುಖಂಡರಿಗೆ, ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಬೆಳ್ಳಿ ನಾಣ್ಯ ವಿತರಣೆ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.