ಚಿಕ್ಕಬಳ್ಳಾಪುರ: ಗಂಟಲಲ್ಲಿ ಸೇಬು ಹಣ್ಣಿನ ತುಣುಕು ಸಿಕ್ಕಿ ಹಾಕಿಕೊಂಡು ನಗರದ ನಕ್ಕಲಕುಂಟೆಯ ಶಾಂತಿನಗರದ ನಿವಾಸಿ ಕಿಜರ್ ಎಂಬುವರ ಪುತ್ರ ಆಸೀಫ್ (11) ಶನಿವಾರ ಮೃತಪಟ್ಟಿದ್ದಾನೆ.
ಇತ್ತೀಚೆಗೆ ಮರದಿಂದ ಬಿದ್ದು ಕಾಲಿಗೆ ಗಾಯ ಮಾಡಿಕೊಂಡು ಜ್ವರದಿಂದ ಬಳಲುತ್ತಿದ್ದ ಆಸೀಫ್, ಚಿಕಿತ್ಸೆ ಪಡೆಯುತ್ತ ಮನೆಯಲ್ಲಿಯೇ ಇದ್ದ. ಶನಿವಾರ ಬೆಳಿಗ್ಗೆ 11ರ ಸುಮಾರಿಗೆ ಸೇಬು ಹಣ್ಣು ತಿನ್ನುವ ವೇಳೆ ಏಕಾಏಕಿ ಕುಸಿದು ಬಿದ್ದು, ಅಸ್ವಸ್ಥಗೊಂಡು ಮೃತಪಟ್ಟಿದ್ದ. ಮಗನ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿ ಕಿಜರ್ ಅವರು ನಗರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದರು.
ಆಸೀಫ್ ಶವದ ಮರಣೋತ್ತರ ಪರೀಕ್ಷೆ ನಡೆಸಿದ ಜಿಲ್ಲಾ ಆಸ್ಪತ್ರೆಯ ವೈದ್ಯರು ಗಂಟಲಿನಲ್ಲಿ ಸೇಬು ಸಿಕ್ಕಿಹಾಕಿಕೊಂಡಿದ್ದರಿಂದಲೇ ಬಾಲಕ ಮೃತಪಟ್ಟಿದ್ದಾನೆ ಎಂದು ಮೌಖಿಕವಾಗಿ ತಿಳಿಸಿದ್ದಾರೆ ಎಂದು ಪೊಲೀಸರು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.