ಸಿದ್ದಾಪುರ (ಕೊಡಗು ಜಿಲ್ಲೆ): ಸಮೀಪದ ಕರಡಿಗೋಡು ಗ್ರಾಮದಲ್ಲಿ ಸೋಮವಾರ ಕಾಡಾನೆ ದಾಳಿಗೆ ಕಾಫಿ ಬೆಳೆಗಾರ ಬಲಿಯಾಗಿದ್ದಾರೆ.
ಗ್ರಾಮದ ಮೋಹನ್ ದಾಸ್ (65) ಮೃತಪಟ್ಟವರು. ಕಾಫಿ ಕೊಯ್ಲು ಮಾಡಲು ಕಾರ್ಮಿಕರನ್ನು ಬಿಟ್ಟು ವಾಪಸ್ ಬರುವಾಗ ಕಾಡಾನೆ ತುಳಿದು ಸಾಯಿಸಿದೆ.
ಈ ಭಾಗದಲ್ಲಿ ಆನೆ ಹಾವಳಿ ನಿರಂತರವಾಗಿದ್ದರೂ ಅರಣ್ಯಾಧಿಕಾರಿಗಳು ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ ಸ್ಥಳೀಯರು, ಸಿದ್ದಾಪುರ ಪಟ್ಟಣದಲ್ಲಿ ಒಂದು ಗಂಟೆ ಬಂದ್ ನಡೆಸಿದರು. ತೋಟಗಳಿಗೆ ಕಾಡಾನೆಗಳು ಬಂದಿರುವ ಮಾಹಿತಿಯಿದ್ದರೂ ಕಾಡಿಗಟ್ಟುವ ಕಾರ್ಯಾಚರಣೆ ನಡೆಸುತ್ತಿಲ್ಲ ಎಂದು ಆರೋಪಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.