ADVERTISEMENT

ಶಿವಮೊಗ್ಗ: ಮಂಜುನಾಥಗೌಡ ಜೆಡಿಎಸ್‌ಗೆ

​ಪ್ರಜಾವಾಣಿ ವಾರ್ತೆ
Published 22 ಜನವರಿ 2018, 19:30 IST
Last Updated 22 ಜನವರಿ 2018, 19:30 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಶಿವಮೊಗ್ಗ ಜಿಲ್ಲಾ ಸಹಕಾರಿ ಬ್ಯಾಂಕ್ ಅಧ್ಯಕ್ಷ ಆರ್.ಎಂ. ಮಂಜುನಾಥಗೌಡ, ಇದೇ 23ರಂದು ಜೆಡಿಎಸ್‌ ಸೇರಲಿದ್ದಾರೆ. ಇಲ್ಲಿನ ಪದ್ಮನಾಭನಗರದಲ್ಲಿರುವ ಎಚ್.ಡಿ.ದೇವೇಗೌಡರ ನಿವಾಸದಲ್ಲಿ ಅವರು ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ.

2013ರ ವಿಧಾನಸಭೆ ಚುನಾವಣೆಯಲ್ಲಿ ಬಿ.ಎಸ್‌. ಯಡಿಯೂರಪ್ಪ ನೇತೃತ್ವದ ಕೆಜೆಪಿ ಅಭ್ಯರ್ಥಿಯಾಗಿ ತೀರ್ಥಹಳ್ಳಿ ಕ್ಷೇತ್ರದಿಂದ ಸ್ಪರ್ಧಿಸಿದ್ದ ಮಂಜುನಾಥಗೌಡ, ಬಳಿಕ ಬಿಜೆಪಿ ಜತೆಗೆ ಗುರುತಿಸಿಕೊಂಡಿದ್ದರು. ಅದಾದ ನಂತರ ಕಾಂಗ್ರೆಸ್ ಸೇರಿದ್ದರು. ಚುನಾವಣೆ ಹತ್ತಿರವಾಗುತ್ತಿದ್ದಂತೆ ಜೆಡಿಎಸ್‌ ಸೇರಲು ಮುಂದಾಗಿದ್ದಾರೆ.

2018ರ ಚುನಾವಣೆಯಲ್ಲಿ ಜೆಡಿಎಸ್‌ ಟಿಕೆಟ್ ನೀಡಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.