ADVERTISEMENT

ಪ್ರಧಾನಿ ಮೋದಿಗೆ ಮುತ್ತಿಗೆ: ಹೆಬಸೂರ

​ಪ್ರಜಾವಾಣಿ ವಾರ್ತೆ
Published 23 ಜನವರಿ 2018, 19:30 IST
Last Updated 23 ಜನವರಿ 2018, 19:30 IST

ಹುಬ್ಬಳ್ಳಿ: ಬೆಂಗಳೂರಿಗೆ ಫೆಬ್ರುವರಿ 4ರಂದು ಬರಲಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಲಪ್ರಭಾ ಮಹದಾಯಿ ಕಳಸಾ ಬಂಡೂರಿ ರೈತ ಹೋರಾಟ ಸಮಿತಿಯ ಮುಖಂಡರು ಮುತ್ತಿಗೆ ಹಾಕಲು ನಿರ್ಧರಿಸಿದ್ದಾರೆ.

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ ಅಧ್ಯಕ್ಷ ಲೋಕನಾಥ ಹೆಬಸೂರ ‘ನೀರಿನ ವಿಷಯದಲ್ಲಿ ಎಲ್ಲಾ ಪಕ್ಷಗಳು ರಾಜಕೀಯ ಮಾಡುತ್ತಿವೆ. ಇದರಿಂದ ಹೋರಾಟಗಾರರ ಪ್ರಯತ್ನಕ್ಕೆ ಬೆಲೆಯೇ ಇಲ್ಲದಂತಾಗಿದೆ. ಆದ್ದರಿಂದ, ಪ್ರಧಾನಿಗೆ ಮುತ್ತಿಗೆ ಹಾಕಲು ಉತ್ತರ ಕರ್ನಾಟಕದಿಂದ ಸಾವಿರಾರು ರೈತರು ಬೆಂಗಳೂರಿಗೆ ತೆರಳಲಿದ್ದೇವೆ’ ಎಂದರು.

‘ಚುನಾವಣೆಗೂ ಮೊದಲೇ ನೀರಿನ ಸಮಸ್ಯೆ ಪರಿಹರಿಸದಿದ್ದರೆ, ಯಾವ ಪಕ್ಷಗಳನ್ನೂ ಬೆಂಬಲಿಸುವುದಿಲ್ಲ. ಸಮಿತಿ ವತಿಯಿಂದಲೇ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.