ADVERTISEMENT

ಬನ್ನಿಕೋಡು: ಸವರ್ಣಿಯ–ದಲಿತರ ನಡುವೆ ವಾಗ್ವಾದ

​ಪ್ರಜಾವಾಣಿ ವಾರ್ತೆ
Published 24 ಜನವರಿ 2018, 19:30 IST
Last Updated 24 ಜನವರಿ 2018, 19:30 IST

ಹರಿಹರ: ತಾಲ್ಲೂಕಿನ ಬನ್ನಿಕೋಡು ಗ್ರಾಮದಲ್ಲಿ ದಲಿತರಿಗೆ ಕ್ಷೌರ ಮಾಡಲು ನಿರಾಕರಿಸಿದ ಕಾರಣ ಬುಧವಾರ ದಲಿತ ಮತ್ತು ಸವರ್ಣಿಯರ ಮಧ್ಯೆ ವಾಗ್ವಾದ ನಡೆಯಿತು.

ಬನ್ನಿಕೋಡು ಗ್ರಾಮದಲ್ಲಿ ಪಂಪಣ್ಣ ಎಂಬುವವರ ಕ್ಷೌರದ ಅಂಗಡಿಯಲ್ಲಿ ದಲಿತರಿಗೆ ಸೇವೆ ಒದಗಿಸುತ್ತಿಲ್ಲ ಎಂದು ದಲಿತ ಮುಖಂಡ ವಾಗೀಶ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ವಿಚಾರವಾಗಿ ಅಂಗಡಿ ಮಾಲೀಕ ಹಾಗೂ ದಲಿತರ ನಡುವೆ ವಾಗ್ವಾದ ನಡೆದು, ಕೆಲಕಾಲ ಉದ್ವಿಗ್ನ ವಾತಾವರಣ ಸೃಷ್ಟಿಯಾಗಿತ್ತು.

ಸ್ಥಳಕ್ಕೆ ಭೇಟಿ ನೀಡಿದ ತಹಶೀಲ್ದಾರ್ ರೆಹಾನ್‌ ಪಾಷಾ ಹಾಗೂ ಸಿಪಿಐ ಲಕ್ಷ್ಮಣ ನಾಯ್ಕ ಗ್ರಾಮದಲ್ಲಿ ಶಾಂತಿ ಸಭೆ ನಡೆಸಿ, ವಾತಾವರಣ ತಿಳಿಗೊಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.