ADVERTISEMENT

ಕಲಬುರ್ಗಿಯಲ್ಲಿ ಸಾಂಕೇತಿಕ ಪ್ರತಿಭಟನೆ: ಬಂದ್‌ ಇಲ್ಲ

​ಪ್ರಜಾವಾಣಿ ವಾರ್ತೆ
Published 25 ಜನವರಿ 2018, 4:47 IST
Last Updated 25 ಜನವರಿ 2018, 4:47 IST
ಚಿತ್ರ ಕೃಪೆ: ಎಎನ್ಐ
ಚಿತ್ರ ಕೃಪೆ: ಎಎನ್ಐ   

ಬೆಂಗಳೂರು: ಮಹದಾಯಿ ಯೋಜನೆ ವಿವಾದವನ್ನು ಸಂಧಾನದ ಮೂಲಕ ಬಗೆಹರಿಸಲು ಪ್ರಧಾನಿ ನರೇಂದ್ರ ಮೋದಿ ಮಧ್ಯಸ್ಥಿಕೆ ವಹಿಸಬೇಕೆಂದು ಒತ್ತಾಯಿಸಿ ಕನ್ನಡ ಸಂಘಟನೆಗಳ ಒಕ್ಕೂಟವು ಕರೆ ನೀಡಿರುವ ‘ಕರ್ನಾಟಕ ಬಂದ್‌’ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಕೆಲ ಭಾಗಗಳಲ್ಲಿ ಬಸ್‌ ಸಂಚಾರ ಸ್ಥಗಿತ ಹಾಗೂ ವ್ಯತ್ಯಯಗೊಂಡಿದೆ. ಮಂಗಳೂರು, ಉಡುಪಿ, ಶಿರಸಿ, ರಾಯಚೂರು ಹಾಗೂ ಕಲಬುರ್ಗಿಯಲ್ಲಿ ಸಹಜ ಸ್ಥಿತಿ ಮುಂದುವರಿದಿದೆ.

ಬೆಂಗಳೂರಿನ ಅತ್ತಿಬೆಲೆ ರಸ್ತೆಯಲ್ಲಿ ಕನ್ನಡ ಸಂಘಟನೆಯ ಹೋರಾಟಗಾರರು ಉರುಳುಸೇವೆ ನಡೆಸಿ ಪ್ರತಿಭಟನೆ ನಡೆಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.