ADVERTISEMENT

ಬೋನಿಗೆ ಬಿದ್ದ ಚಿರತೆ

​ಪ್ರಜಾವಾಣಿ ವಾರ್ತೆ
Published 26 ಜನವರಿ 2018, 19:30 IST
Last Updated 26 ಜನವರಿ 2018, 19:30 IST
ಬೋನಿಗೆ ಬಿದ್ದಿರುವ ಚಿರತೆ
ಬೋನಿಗೆ ಬಿದ್ದಿರುವ ಚಿರತೆ   

ಹೊಸಪೇಟೆ: ತಾಲ್ಲೂಕಿನ ಗಾದಿಗನೂರು ಸಮೀಪದ ಬೂದಗುಡ್ಡದ ಬಳಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಗುರುವಾರ ರಾತ್ರಿ ಚಿರತೆ ಬಿದ್ದಿದೆ.

‘ಕಳೆದ ಕೆಲವು ದಿನಗಳಿಂದ ಗ್ರಾಮದ ಸುತ್ತಮುತ್ತ ಚಿರತೆಗಳ ಓಡಾಟ ಹೆಚ್ಚಾಗಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಸ್ಥಳೀಯರ ಪ್ರಕಾರ ನಾಲ್ಕು ಚಿರತೆಗಳು ಕಾಣಿಸಿಕೊಂಡಿವೆ. ಹೀಗಾಗಿ ಮಂಗಳವಾರ ಬೋನು ಇಡಲಾಗಿತ್ತು. ಸದ್ಯ ಒಂದು ಚಿರತೆ ಬಿದ್ದಿದೆ’ ಎಂದು ಅರಣ್ಯ ಅಧಿಕಾರಿಯೊಬ್ಬರು ‘ಪ್ರಜಾವಾಣಿ’ಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT