ಬೆಂಗಳೂರು: ರಾಜ್ಯ ಬಂದ್ಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಹಾಗೂ ವಾಟಾಳ್ ನಾಗರಾಜ್ಗೆ ಹೈಕೋರ್ಟ್ ಸೋಮವಾರ ತುರ್ತು ನೋಟಿಸ್ ಜಾರಿ ಮಾಡಿದೆ.
ರಾಜ್ಯ ಬಂದ್ಗಳ ನಿರ್ಬಂಧ ಹಾಗೂ ಪದೇ ಪದೇ ರಾಜ್ಯ ಬಂದ್ಗೆ ಕರೆ ನೀಡುತ್ತಿರುವ ಕನ್ನಡ ಚಳವಳಿ ವಾಟಾಳ್ ಪಕ್ಷ ನಿಷೇಧಿಸುವಂತೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ನೋಟಿಸ್ ಜಾರಿ ಮಾಡಿದೆ.
ಕನ್ನಡ ಚಳವಳಿ ವಾಟಾಳ್ ಪಕ್ಷದಿಂದ ಕರೆ ನೀಡಿದ್ದ ರಾಜ್ಯ ಬಂದ್ ಪ್ರಶ್ನಿಸಿ ರಾಜಾಜಿನಗರ ಶ್ರದ್ಧಾ ಪೋಷಕರ ಸಂಘಟನೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.