ADVERTISEMENT

ಬಿಜೆಪಿ ಶಾಸಕ ಸಿ.ಟಿ. ರವಿಗೆ ಕೊಲೆ ಬೆದರಿಕೆ

​ಪ್ರಜಾವಾಣಿ ವಾರ್ತೆ
Published 30 ಜನವರಿ 2018, 5:50 IST
Last Updated 30 ಜನವರಿ 2018, 5:50 IST
ಸಿ.ಟಿ. ರವಿ (ಸಂಗ್ರಹ ಚಿತ್ರ)
ಸಿ.ಟಿ. ರವಿ (ಸಂಗ್ರಹ ಚಿತ್ರ)   

ಚಿಕ್ಕಮಗಳೂರು: ಬಿಜೆಪಿ ಶಾಸಕ ಸಿ.ಟಿ.ರವಿ ಅವರಿಗೆ ಪತ್ರದ ಮೂಲಕ ಕೊಲೆ ಬೆದರಿಕೆ ಹಾಕಲಾಗಿದೆ.

ಈ ಕುರಿತು 'ಪ್ರಜಾವಾಣಿ'ಯೊಂದಿಗೆ ಮಾತನಾಡಿದ ರವಿ ಅವರು, ‘ಅಂಚೆ ಮೂಲಕ ಪತ್ರವೊಂದು ಬಂದಿದೆ. ಅದರಲ್ಲಿ ಕೊಲೆ ಬೆದರಿಕೆ ಹಾಕಿದ್ದಾರೆ. ಬಿಜೆಪಿ, ವಿಶ್ವ ಹಿಂದು ಪರಿಷತ್ ಬಗ್ಗೆ ಅವಹೇಳನ ಮಾಡಿ ಬರೆದಿದ್ದಾರೆ’ ಎಂದು ತಿಳಿಸಿದ್ದಾರೆ.

ಪತ್ರದಲ್ಲಿ ‘ಅಲೆ ಹದೀಶ್ ಗ್ರೂಪ್ ಆಫ್ ಕರ್ನಾಟಕ’ ಎಂಬ ಹೆಸರು ಇದೆ. ಪತ್ರದಲ್ಲಿ ಬೆಂಗಳೂರು ಅಂಚೆ ಮೊಹರು ಇದೆ. ಬೆದರಿಕೆ ಪತ್ರ ಬಂದಿರುವುದಕ್ಕೆ ಸಂಬಂಧಿಸಿದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡುತ್ತೇನೆ' ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.