ಬೆಂಗಳೂರು: ‘ಆಲ್ ಇಂಡಿಯಾ ಮಜ್ಲಿಸ್ ಇತ್ತೆಹಾದುಲ್ ಮುಸ್ಲಿಮೀನ್ ಅಧ್ಯಕ್ಷ ಅಸಾದುದ್ದೀನ್ ಒವೈಸಿ ಜತೆ ಯಾವುದೇ ಮಾತುಕತೆಯೂ ನಡೆದಿಲ್ಲ. ಅವರ ಜತೆ ಹೊಂದಾಣಿಕೆ ಮಾಡಿಕೊಳ್ಳುವ ಅಭಿಲಾಶೆಯೂ ಪಕ್ಷಕ್ಕೆ ಇಲ್ಲ. ಅದು ಸತ್ಯಕ್ಕೆ ದೂರವಾದ ಸಂಗತಿ’ ಎಂದು ಬಿಜೆಪಿ
ವಕ್ತಾರ ಎಸ್. ಸುರೇಶ್ ಕುಮಾರ್ ಮಾಧ್ಯಮಗೋಷ್ಠಿಯಲ್ಲಿ ಹೇಳಿದರು.
ಬಿಜೆಪಿ ತಾರಾ ಪ್ರಚಾರಕರ ಪಟ್ಟಿ ಪಕ್ಷದ ವರಿಷ್ಠರಿಂದ ಬಂದಿಲ್ಲ. ಪಟ್ಟಿಯಲ್ಲಿ ಯಾರಿಗೆ ಯಾವ ಸ್ಥಾನ ಇದೆ ಎಂಬುದು ಈವರೆಗೂ ಗೊತ್ತಿಲ್ಲ. ಪಟ್ಟಿ ಬಿಡುಗಡೆಯಾಗದೇ ಇರುವುದರಿಂದ ತಳಮಳ ಸೃಷ್ಟಿಯಾಗಲು ಹೇಗೆ ಸಾಧ್ಯ ಎಂದೂ ಅವರು ಪ್ರಶ್ನಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.