ADVERTISEMENT

ಕೈ ಉತ್ಪನ್ನಗಳ ನ್ಯಾಯಬೆಲೆಗೆ ಆಗ್ರಹ: ಪಾದಯಾತ್ರೆ ಆರಂಭ

​ಪ್ರಜಾವಾಣಿ ವಾರ್ತೆ
Published 30 ಜನವರಿ 2018, 19:30 IST
Last Updated 30 ಜನವರಿ 2018, 19:30 IST
ಕೈ ಉತ್ಪನ್ನಗಳಿಗೆ ನ್ಯಾಯಬೆಲೆ ನೀಡುವಂತೆ ಆಗ್ರಹಿಸಿ ಹಿರಿಯ ರಂಗಕರ್ಮಿ ಪ್ರಸನ್ನ ನೇತೃತ್ವದಲ್ಲಿ ಮಂಗಳವಾರ ಯಾದಗಿರಿ ಜಿಲ್ಲೆ ಹುಣಸಗಿ ತಾಲ್ಲೂಕಿನ ಕೊಡೇಕಲ್‌ನಿಂದ ಪಾದಯಾತ್ರೆ ಆರಂಭವಾಯಿತು
ಕೈ ಉತ್ಪನ್ನಗಳಿಗೆ ನ್ಯಾಯಬೆಲೆ ನೀಡುವಂತೆ ಆಗ್ರಹಿಸಿ ಹಿರಿಯ ರಂಗಕರ್ಮಿ ಪ್ರಸನ್ನ ನೇತೃತ್ವದಲ್ಲಿ ಮಂಗಳವಾರ ಯಾದಗಿರಿ ಜಿಲ್ಲೆ ಹುಣಸಗಿ ತಾಲ್ಲೂಕಿನ ಕೊಡೇಕಲ್‌ನಿಂದ ಪಾದಯಾತ್ರೆ ಆರಂಭವಾಯಿತು   

ಯಾದಗಿರಿ: ‘ಕೈಉತ್ಪನ್ನಗಳಿಗೆ ನ್ಯಾಯಬೆಲೆ ಕೊಡಿ’ ಎಂದು ಆಗ್ರಹಿಸಿ ಹಿರಿಯ ರಂಗಕರ್ಮಿ ಪ್ರಸನ್ನ ಅವರ ನೇತೃತ್ವದಲ್ಲಿ ಗ್ರಾಮ ಸೇವಾ ಸಂಘವು ಹಮ್ಮಿಕೊಂಡಿರುವ ಪಾದಯಾತ್ರೆಯು ಮಂಗಳವಾರ ಜಿಲ್ಲೆಯ ಕೊಡೇಕಲ್‌ನಿಂದ ಆರಂಭವಾಯಿತು.

ಈ ಪಾದಯಾತ್ರೆಯು 15 ದಿನಗಳಲ್ಲಿ 246 ಕಿಲೋ ಮೀಟರ್ ಕ್ರಮಿಸಿ, ಬಳ್ಳಾರಿ ಜಿಲ್ಲೆಯ ಕೊಟ್ಟೂರಿನಲ್ಲಿ ಮುಕ್ತಾಯಗೊಳ್ಳಲಿದೆ.

‘ಏಕತಾ ಸಮಾವೇಶ ಮತ್ತು ಪಾದಯಾತ್ರೆಯು ಕೆಲವು ತಿಂಗಳುಗಳಿಂದ ನಡೆಯುತ್ತಿರುವ ಕರ ನಿರಾಕರಣಾ ಸತ್ಯಾಗ್ರಹದ ಮುಂದುವರಿಕೆಯಾಗಿದೆ’ ಎಂದು ಪಾದಯಾತ್ರೆ ಕಾರ್ಯಕರ್ತ ರಾಜೇಸಾಬ್ ಬಾಗವಾನ ಹೇಳಿದರು.

ADVERTISEMENT

2014 ರಲ್ಲಿ ನೇಕಾರರು ಪ್ರಸನ್ನ ಅವರ ನೇತೃತ್ವದಲ್ಲಿ ಸುಸ್ಥಿರ ಬದುಕಿನ ಸತ್ಯಾಗ್ರಹ ನಡೆಸಿದ್ದರು. 2015ರಲ್ಲಿ ಪುನಃ ಮೈಸೂರು ಜಿಲ್ಲೆಯ ಬದನವಾಳುನಲ್ಲಿ ಸತ್ಯಾಗ್ರಹ ನಡೆಸಲಾಗಿತ್ತು. ಈಗ ಕಾಯಕಜೀವಿಗಳ ಏಕತಾ ಸಮಾವೇಶ ಹಾಗೂ ಕೈ ಉತ್ಪನ್ನಗಳಿಗಾಗಿ ಪಾದಯಾತ್ರೆ ಮುಂದುವರಿದಿದೆ.

ಪಾದಯಾತ್ರೆ ಆರಂಭದಲ್ಲಿ ಹಿರಿಯ ಪತ್ರಕರ್ತ ರಂಜಾನ್ ದರ್ಗಾ, ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ, ಸಾಹಿತಿ ಅಲ್ಲಮಪ್ರಭು ಬೆಟ್ಟದೂರು ಇದ್ದರು.

ಬಾಗಲಕೋಟೆ, ರಾಯಚೂರು, ಗದಗ, ಕಲಬುರ್ಗಿ ಜಿಲ್ಲೆಗಳ ಕೈ ಉತ್ಪನ್ನಗಳ ಉತ್ಪಾದಕರು, ಕುಶಲಕರ್ಮಿಗಳು ಪಾದಯಾತ್ರೆಯಲ್ಲಿ ಭಾಗವಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.