ಹುಬ್ಬಳ್ಳಿ: ದೇಶದ ಆರ್ಥಿಕ ಸ್ಥಿತಿ, ಗ್ರಾಮೀಣ ಅಭಿವೃದ್ಧಿ ಮತ್ತು ರೈತರ ಹಿತಾಸಕ್ತಿ ಒಳಗೊಂಡಂತೆ ಅಭಿವೃದ್ಧಿ ಪೂರಕವಾದ ಬಜೆಟ್ ಅನ್ನು ವಿತ್ತ ಸಚಿವ ಅರುಣ್ ಜೇಟ್ಲಿ ಅವರು ಗುರುವಾರ ಮಂಡಿಸಿದ್ದಾರೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಜಗದೀಶ ಶೆಟ್ಟರ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕೃಷಿ ಕ್ಷೇತ್ರದಲ್ಲಿ ಕ್ರಾಂತಿ ಮಾಡುವಂತಹ ಅಂಶಗಳನ್ನು ಬಜೆಟ್ ಒಳಗೊಂಡಿದೆ. 50 ಲಕ್ಷ ಯುವಕರಿಗೆ ಉಚಿತ ತರಬೇತಿ ನೀಡುವ ಮೂಲಕ ಉದ್ಯೋಗ ಸೃಷ್ಟಿಗೆ ಒತ್ತು ನೀಡಲಾಗಿದೆ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.