ADVERTISEMENT

ಪ್ರಧಾನಿ ಕಾರ್ಯಕ್ರಮದ ವೇಳೆ ಪಕೋಡಾ ಮಾರಲು ಅನುಮತಿ ಕೇಳಿದ ವಿದ್ಯಾರ್ಥಿ ಒಕ್ಕೂಟ!

​ಪ್ರಜಾವಾಣಿ ವಾರ್ತೆ
Published 3 ಫೆಬ್ರುವರಿ 2018, 14:57 IST
Last Updated 3 ಫೆಬ್ರುವರಿ 2018, 14:57 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಭಾನುವಾರ ಬಿಜೆಪಿ ಪರಿವರ್ತನಾ ಯಾತ್ರೆಯ ಸಮಾರೋಪ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗಲಿದ್ದಾರೆ. ಇದೇ ವೇಳೆ ಪಕೋಡಾ ಮಾರಲು ವಿದ್ಯಾರ್ಥಿಗಳ ಒಕ್ಕೂಟ ಅನುಮತಿ ಕೇಳಿರುವ ಕುರಿತು ಸಂಸದ ಪ್ರತಾಪ್‌ ಸಿಂಹ ಟ್ವೀಟ್‌ ಮಾಡಿದ್ದಾರೆ.

ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ(ಎನ್‌ಎಸ್‌ಯುಐ)ವು ಪ್ರಧಾನಿ ಕಾರ್ಯಕ್ರಮದ ವೇಳೆ ಪಕೋಡಾ ಮಾರಲು ಅನುಮತಿ ಕೇಳಿರುವುದಾಗಿ ಟ್ವೀಟ್‌ ಮಾಡಿರುವ ಪ್ರತಾಪ್‌ ಸಿಂಹ, ‘ಪಕೋಡನಾದ್ರು ಮಾರಿ, ಬಜ್ಜಿ ಬೋಂಡನಾದ್ರು ಮಾರಿ. ಆದರೆ ದೇಶ ಮಾರೋಕೆ ಮಾತ್ರ ಕಾಂಗ್ರೆಸ್‌ಗೆ ನಾವು ಬಿಡೋಲ್ಲ’ ಎಂದು ಕಾಂಗ್ರೆಸ್‌ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT