ಹೊನ್ನಾವರ: ಪಟ್ಟಣದ ಯುವಕ ಪರೇಶ ಮೇಸ್ತ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ನಿವಾಸಿ ಸಲೀಂ ಶೇಖ್ (ಜಿಮ್ ಸಲೀಂ) ಎಂಬುವವರನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ.
ಸಿಪಿಐ ಚೆಲುವರಾಯಸ್ವಾಮಿ ನೇತೃತ್ವದ ಪೊಲೀಸರ ತಂಡ, ಆರೋಪಿಯನ್ನು ಸಾಗರದ ಮನೆಯೊಂದರಲ್ಲಿ ಬಂಧಿಸಿದೆ.
‘ಡಿ.6ರಂದು ನಡೆದ ಗಲಭೆಯ ಸಂದರ್ಭದಲ್ಲಿ ಪರೇಶನನ್ನು ಕೊಲೆ ಮಾಡಲಾಗಿದೆ’ ಎಂದು ಅವರ ತಂದೆ ಕಮಲಾಕರ ಮೇಸ್ತ 5 ಮಂದಿಯ ವಿರುದ್ಧ ದೂರು ನೀಡಿದ್ದರು. ಅವರ ಪೈಕಿ ಆಜಾದ್ ಅಣ್ಣಿಗೇರಿ ಎಂಬುವವರನ್ನು ಈಗಾಗಲೇ ಬಂಧಿಸಲಾಗಿದೆ. ಉಳಿದ ಆರೋಪಿಗಳಾದ ಸಿಫ್, ಇಮ್ತಿಯಾಜ್, ಫೈಜಲ್ ತಲೆಮರೆಸಿಕೊಂಡಿದ್ದಾರೆ.
ಉಳಿದವರ ಬಗ್ಗೆಯೂ ಸುಳಿವು ಸಿಕ್ಕಿದ್ದು, ಅವರನ್ನೂ ಶೀಘ್ರವೇ ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.