ADVERTISEMENT

ಗೆದ್ದವರು ಹಾಡಲಿಲ್ಲ

​ಪ್ರಜಾವಾಣಿ ವಾರ್ತೆ
Published 3 ಫೆಬ್ರುವರಿ 2018, 19:30 IST
Last Updated 3 ಫೆಬ್ರುವರಿ 2018, 19:30 IST

ಪುತ್ತೂರು: ಕೊಪ್ಪಳ ಜಿಲ್ಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ಯುವಜನ ಮೇಳದಲ್ಲಿ ಲಾವಣಿ ಸ್ಪರ್ಧೆಯಲ್ಲಿ ಸಂಗೀತ ಎಂಬುವರು ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟದ ಯುವಜನ ಮೇಳಕ್ಕೆ ಆಯ್ಕೆಯಾಗಿದ್ದರು. ಆದರೆ ಶನಿವಾರ ನಡೆದ ರಾಜ್ಯಮಟ್ಟದ ಈ ಸ್ಪರ್ಧೆಯಲ್ಲಿ ಸಂಗೀತ ಅವರ ಬದಲು ರಾಜರಾಜೇಶ್ವರಿ ಎಂಬವರನ್ನು ಹಾಡಿಸಲಾಯಿತು!

‘ಪ್ರಕರಣದ ಬಗ್ಗೆ ಕಾರ್ಯಕ್ರಮದ ಆಯೋಜಕರಲ್ಲಿ ಪ್ರಶ್ನಿಸಿದರೂ ಗಾಯಕಿಗೆ ಸೂಕ್ತ ಪ್ರತಿಕ್ರಿಯೆ ಸಿಗಲಿಲ್ಲ. ಅವರಿಗೆ ಉದ್ದೇಶಪೂರ್ವಕವಾಗಿ  ಅವಮಾನ ಮಾಡಲಾಗಿದೆ’ ಎಂದು ಕೊಪ್ಪಳದಿಂದ ಬಂದ ಇತರ ಕಲಾವಿದರು ಆರೋಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT