ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ನಟ ಪ್ರಕಾಶ್ ರಾಜ್ ( ಪ್ರಕಾಶ್ ರೈ) ಟೀಕಾ ಪ್ರಹಾರ ಮುಂದುವರೆಸಿದ್ದು ‘2014ರಲ್ಲಿ ಮಾರಾಟವಾದ ಪ್ರಾಮಿಸ್ ಟೂತ್ ಪೇಸ್ಟ್ ರೈತರು ಮತ್ತು ನಿರುದ್ಯೋಗಿಗಳ ಮುಖದಲ್ಲಿ ಮಂದಹಾಸ ತರುವಲ್ಲಿ ವಿಫಲವಾಗಿದ್ದು ಅದನ್ನು ಮತ್ತೆ ಕರ್ನಾಟಕದಲ್ಲಿ ಮಾರಾಟ ಮಾಡಿದ್ದಾರೆ’ ಎಂದು ಟ್ವೀಟ್ ಮಾಡಿದ್ದಾರೆ.
ಭಾನುವಾರ ನಡೆದ ನವ ಕರ್ನಾಟಕ ಪರಿವರ್ತನಾ ಯಾತ್ರೆಯಲ್ಲಿ ಭಾಗವಹಿಸಿ ಮಾತನಾಡಿದ ಪ್ರಧಾನಿ ನರೇಂದ್ರ ವಿರುದ್ಧ ಪ್ರಕಾಶ್ ರಾಜ್ ಟ್ವಿಟರ್ನಲ್ಲಿ ಟೀಕೆ ಮಾಡಿದ್ದಾರೆ.
2014ರಲ್ಲಿ ಮಾರಾಟವಾದ ಪ್ರಾಮಿಸ್ ಟೂಥ್ ಪೆಸ್ಟ್ ಬ್ರಶ್ ಮಾಡುವುದನ್ನು ಮರೆತುಬಿಟ್ಟಿದೆ. 'ನನ್ನ ದೇಶದ ತೊಂದರೆಯಲ್ಲಿರುವ ರೈತರು ಮತ್ತು ನಿರುದ್ಯೋಗಿ ಯುವಕರ ಮುಖದಲ್ಲಿ ಮಂದಹಾಸವನ್ನು ತರಲಿಲ್ಲ, ನಿನ್ನೆ ಕರ್ನಾಟಕದ ಪರಿವರ್ತನಾ ಯಾತ್ರೆಯಲ್ಲಿ ಮಾರಾಟವಾದ ಪ್ರಾಮಿಸ್ ಟೂತ್ ಪೇಸ್ಟ್ ಮೇಲೆ ನಿಮಗೆ ನಂಬಿಕೆ ಇದೆಯೇ? ಎಂದು ಟ್ವೀಟ್ ಮಾಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.