ಬೆಂಗಳೂರು: ಸಂಸತ್ನಲ್ಲಿ ಕರ್ನಾಟಕ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿ ತಮ್ಮ ಹೆಸರನ್ನು ಉಲ್ಲೇಖಿಸಿದ್ದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವಿಟರ್ನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.
‘ನೀವು ಸಂಸತ್ನಲ್ಲಿ ನನ್ನನ್ನು ಮತ್ತು ಬಸವಣ್ಣನವರನ್ನು ನೆನಪಿಸಿಕೊಂಡಿದ್ದರಿಂದ ಸಂತಸವಾಗಿದೆ. ಉಳ್ಳವರು ಶಿವಾಲಯ ಮಾಡುವರು, ನಾನೇನು ಮಾಡಲಿ ಬಡವನಯ್ಯಾ ಎಂದು ಬಸವಣ್ಣ ಹೇಳಿದ್ದರು. ಬಸವಣ್ಣನವರ ತತ್ವಗಳನ್ನು ನೀವು ಅನುಸರಿಸಿದರೆ ಕನ್ನಡಿಗರು ನಿಮಗೆ ಧನ್ಯವಾದ ಹೇಳುತ್ತಾರೆ’ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.