ADVERTISEMENT

ಮಠ ಧಾರ್ಮಿಕ ದತ್ತಿ ವ್ಯಾಪ್ತಿಗೆ ತರುವುದು ಸಾಧ್ಯವಾಗಲಿಕ್ಕಿಲ್ಲ; ಸಿದ್ಧಲಿಂಗಶ್ರೀ

​ಪ್ರಜಾವಾಣಿ ವಾರ್ತೆ
Published 7 ಫೆಬ್ರುವರಿ 2018, 19:30 IST
Last Updated 7 ಫೆಬ್ರುವರಿ 2018, 19:30 IST

ತುಮಕೂರು: ’ಮಠ ಮಾನ್ಯಗಳನ್ನು ಧಾರ್ಮಿಕ ದತ್ತಿ ಕಾಯ್ದೆಗೊಳಪಡಿಸುವ ಬಗ್ಗೆ ಪೂರ್ಣ ಮಾಹಿತಿ ಇಲ್ಲ. ಆದರೆ, ಇಂತಹ ಪ್ರಸ್ತಾವ ಜಾರಿಯಾಗುವುದು ಸಾಧ್ಯವಾಗಲಿಕ್ಕಿಲ್ಲ’ ಎಂದು ಸಿದ್ಧಗಂಗಾ ಮಠದ ಅಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ ಪ್ರತಿಕ್ರಿಯಿಸಿದರು.

ಬುಧವಾರ ಮಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ,‘ ಪ್ರತಿಯೊಂದು ಮಠಕ್ಕೂ ತನ್ನದೇ ಪದ್ಧತಿ, ಅಸ್ತಿತ್ವ, ಸಂಸ್ಕೃತಿ, ಆಚರಣೆಗಳಿವೆ. ಹೀಗಾಗಿ, ಎಲ್ಲವನ್ನೂ ಒಂದೇ ತೆಕ್ಕೆಗೆ ತರುವುದು ಸಾಧ್ಯವಾಗಲಿಕ್ಕಿಲ್ಲ. ಈ ಬಗ್ಗೆ ಮಠಾಧೀಶರೆಲ್ಲರೂ ಕುಳಿತು ಚರ್ಚಿಸಬೇಕಾಗಬಹುದು’ ಎಂದು  ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT