ADVERTISEMENT

‘ಮಠದ ವಿಷಯಕ್ಕೆ ಬಂದರೆ ಬೆಂಕಿಗೆ ಕೈ ಹಾಕಿದಂತೆ’

​ಪ್ರಜಾವಾಣಿ ವಾರ್ತೆ
Published 7 ಫೆಬ್ರುವರಿ 2018, 19:30 IST
Last Updated 7 ಫೆಬ್ರುವರಿ 2018, 19:30 IST
ವಿದ್ಯಾಧೀಶ ಸ್ವಾಮೀಜಿ
ವಿದ್ಯಾಧೀಶ ಸ್ವಾಮೀಜಿ   

ಉಡುಪಿ: ‘ಸರ್ಕಾರ ಮಠ, ಮಂದಿರಗಳ ವಿಷಯದಲ್ಲಿ ಹಸ್ತಕ್ಷೇಪ ಮಾಡುವುದು ಬೆಂಕಿಗೆ ಕೈ ಹಾಕಿದಂತೆ’ ಎಂದು ಪರ್ಯಾಯ ಪಲಿಮಾರು ಮಠದ ವಿದ್ಯಾಧೀಶ ಸ್ವಾಮೀಜಿ ಹೇಳಿದ್ದಾರೆ.

‘ಸರ್ಕಾರಕ್ಕೆ ತನ್ನದೇ ಆದ ಅನೇಕ ಕಾರ್ಯಗಳಿವೆ. ಅದನ್ನು ಬಿಟ್ಟು ಧಾರ್ಮಿಕ ಸಂಸ್ಥೆಗಳಿಗೆ ಕೈ ಹಾಕಬಾರದು. ಮಠವನ್ನು ಧರ್ಮಾಧಿಕಾರಿಗಳೇ ನೋಡಿಕೊಳ್ಳುತ್ತಾರೆ. ಸರ್ಕಾರ ನಡೆಸಲಾಗದ ಅನೇಕ ಸಂಸ್ಥೆಗಳನ್ನು ಖಾಸಗಿಯವರಿಗೆ ಒಪ್ಪಿಸಿದ ಉದಾಹರಣೆಗಳಿವೆ. ಧರ್ಮ ಸಂಸ್ಥೆಗಳು
ಧರ್ಮ ಪ್ರಚಾರಕ್ಕೆ, ಭಕ್ತರಿಗೆ ಮಾರ್ಗದರ್ಶನಕ್ಕೆ ಮೀಸಲೇ ಹೊರತು ದುಡ್ಡು ಮಾಡುವುದಕ್ಕಲ್ಲ’ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

‘ಸರ್ಕಾರ ಅಂತಹ ಕ್ರಮಕ್ಕೆ ಮುಂದಾದರೆ ಸಾರ್ವಜನಿಕರು ಪ್ರಬಲವಾಗಿ ವಿರೋಧಿಸುತ್ತಾರೆ. ಈ ಬಗ್ಗೆ ಜನಾಭಿಪ್ರಾಯ ಸಹ ಮೂಡಿಸಲಾಗುವುದು. ಈ ಹಿಂದೆ ಕೃಷ್ಣ ಮಠದ ವಿಷಯಕ್ಕೆ ಕೈ ಹಾಕಿ ಸುಟ್ಟುಕೊಂಡಿದ್ದಾರೆ. ಕೋರ್ಟ್ ಕೂಡ ಮಠದ ಪರವಾಗಿ ತೀರ್ಪು ನೀಡಿದೆ ಎಂಬುದನ್ನು ಮರೆಯಬಾರದು. ಸರ್ಕಾರ ತಪ್ಪು ಹೆಜ್ಜೆ ಇಡಬಾರದು, ದ್ವೇಷದ ರಾಜಕಾರಣ ಮಾಡುವುದು ಸಲ್ಲದು’ ಎಂದು ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.