ADVERTISEMENT

ಹನುಮಂತಪ್ಪ ಕೊಪ್ಪದಗೆ ಆರೂಢಶ್ರೀ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 7 ಫೆಬ್ರುವರಿ 2018, 19:30 IST
Last Updated 7 ಫೆಬ್ರುವರಿ 2018, 19:30 IST

ಚಿತ್ರದುರ್ಗ: ಸೇನೆಯಲ್ಲಿ ಲ್ಯಾನ್ಸ್ ನಾಯಕ್ ಆಗಿದ್ದ ಹನುಮಂತಪ್ಪ ಕೊಪ್ಪದ ಅವರಿಗೆ ಇಲ್ಲಿನ ಕಬೀರಾನಂದಾಶ್ರಮದಿಂದ ನೀಡಲಾಗುವ ಆರೂಢಶ್ರೀ ಪ್ರಶಸ್ತಿಯನ್ನು ಮರಣೋತ್ತರವಾಗಿ ನೀಡಲಾಗುವುದು ಎಂದು ಆಶ್ರಮದ ಶಿವಲಿಂಗಾನಂದ ಸ್ವಾಮೀಜಿ ಹೇಳಿದರು.

ಮಹಾಶಿವರಾತ್ರಿ ಮಹೋತ್ಸವದ ಪ್ರಯುಕ್ತ ಫೆಬ್ರುವರಿ 13ರಂದು ಸಂಜೆ ನಡೆಯುವ ಸಮಾರಂಭದಲ್ಲಿ ಕೊಪ್ಪದ ಅವರ ಪತ್ನಿ ಮಹಾದೇವಿ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಪ್ರಶಸ್ತಿಯು ₹ 25 ಸಾವಿರ ನಗದು, ಫಲಕ ಮತ್ತು ಸನ್ಮಾನಪತ್ರವನ್ನು ಒಳಗೊಂಡಿದೆ ಎಂದು ಸ್ವಾಮೀಜಿ ಬುಧವಾರ ಪತ್ರಿಕಾ
ಗೋಷ್ಠಿಯಲ್ಲಿ ತಿಳಿಸಿದರು.

ಸುಮಾರು ಎರಡು ವರ್ಷ ಹಿಂದೆ ಸಿಯಾಚಿನ್‌ ನೀರ್ಗಲ್ಲು ಪ್ರದೇಶದಲ್ಲಿ ಉಂಟಾದ ಹಿಮಪಾತದಲ್ಲಿ ಹನುಮಂತಪ್ಪ ಕೊಪ್ಪದ ಅವರು ಆರು ದಿನಗಳ ಕಾಲ ಜೀವನ್ಮರಣ ಹೋರಾಟ ನಡೆಸಿ ಪವಾಡಸದೃಶ ರೀತಿಯಲ್ಲಿ ಬದುಕಿದ್ದರು.

ADVERTISEMENT

ನಂತರ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದಿದ್ದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.