ADVERTISEMENT

ಟ್ರ್ಯಾಕ್ಟರ್‌ಗೆ ಟ್ಯಾಂಕರ್‌ ಡಿಕ್ಕಿ: ನಾಲ್ವರ ಸಾವು

​ಪ್ರಜಾವಾಣಿ ವಾರ್ತೆ
Published 8 ಫೆಬ್ರುವರಿ 2018, 19:30 IST
Last Updated 8 ಫೆಬ್ರುವರಿ 2018, 19:30 IST

ಕೊಪ್ಪಳ: ಕುಕನೂರು ತಾಲ್ಲೂಕು ಬನ್ನಿಕೊಪ್ಪ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ -63ರಲ್ಲಿ ಟ್ರ್ಯಾಕ್ಟರ್-ಡೀಸೆಲ್ ಟ್ಯಾಂಕರ್ ನಡುವೆ ಗುರುವಾರ ಅಪಘಾತ ಸಂಭವಿಸಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಎಂಟು ಜನ ಗಾಯಗೊಂಡಿದ್ದಾರೆ.

ಇವರೆಲ್ಲ ಹೊಲದ ಕೆಲಸಕ್ಕೆ ಹೋಗುತ್ತಿದ್ದರು. ಹುಬ್ಬಳ್ಳಿ ಕಡೆಯಿಂದ ಬಂದ ಡೀಸೆಲ್‌ ಟ್ಯಾಂಕರ್‌ ಕಾರಿಗೆ ಡಿಕ್ಕಿ ಹೊಡೆದು, ನಂತರ ಟ್ರ್ಯಾಕ್ಟರ್‌ಗೆ ಗುದ್ದಿ ಉರುಳಿಬಿದ್ದಿತು. ಇದರಿಂದ ಎರಡೂ ವಾಹನಗಳು ನಜ್ಜುಗುಜ್ಜಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT