ಬೆಂಗಳೂರು: ಆರನೇ ವೇತನ ಆಯೋಗದ ವರದಿಯ ಶಿಫಾರಸ್ಸು ಕುರಿತು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ವಿಧಾನಪರಿಷತ್ತಿನಲ್ಲಿ ಗುರುವಾರ ಜೆಡಿಎಸ್ನ ಕೆ.ಟಿ.ಶ್ರೀಕಂಠೇಗೌಡರ ಪ್ರಶ್ನೆಗೆ ಉತ್ತರಿಸಿ, ವೇತನ ಆಯೋಗದ ಶಿಫಾರಸ್ಸಿನ ಬಗ್ಗೆ ಶೇ 99.9 ರಷ್ಟು ನೌಕರರು ಸಂತೃಪ್ತರಾಗಿದ್ದಾರೆ ಎಂದರು.
‘ವೇತನ ಆಯೋಗದ ವರದಿಯನ್ನು ಓದಿಲ್ಲ. ಮೂಲ ವೇತನವನ್ನು ಶೇ 30 ರಷ್ಟು ಹೆಚ್ಚಳ ಮಾಡಿರುವುದಾಗಿ ಆಯೋಗದ ಅಧ್ಯಕ್ಷ ಶ್ರೀನಿವಾಸಮೂರ್ತಿ ಹೇಳಿದ್ದಾರೆ’ ಎಂದು ಸಿದ್ದರಾಮಯ್ಯ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.