ADVERTISEMENT

ಮಠಗಳ ವಿಚಾರದಲ್ಲಿ ಸಿದ್ದರಾಮಯ್ಯ ಈಗ ತೆಪ್ಪಗಾಗಿದ್ದಾರೆ : ಯಡಿಯೂರಪ್ಪ

ವಿಧಾನಸಭಾ ಚುಣಾವಣೆ

​ಪ್ರಜಾವಾಣಿ ವಾರ್ತೆ
Published 9 ಫೆಬ್ರುವರಿ 2018, 9:58 IST
Last Updated 9 ಫೆಬ್ರುವರಿ 2018, 9:58 IST
ಪ್ರಜಾವಾಣಿ ಸಂಗ್ರಹ ಚಿತ್ರ
ಪ್ರಜಾವಾಣಿ ಸಂಗ್ರಹ ಚಿತ್ರ   

ಹಾಸನ: ‘ಮಠ–ಮಾನ್ಯಗಳ ವಿಚಾರದಲ್ಲಿ ಸಿದ್ದರಾಮಯ್ಯ ಗೊಂದಲ ಸೃಷ್ಟಿಸುತ್ತಿದ್ದಾರೆ. ಮಠಗಳಿಗೆ ಕಡಿವಾಣ ಹಾಕಲು ಮುಂದಾದರು, ಎಲ್ಲರೂ ತಿರುಗಿ ಬಿದ್ದ ಮೇಲೆ ಈಗ ತೆಪ್ಪಗಾಗಿದ್ದಾರೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಹೇಳಿದರು.

ಸಕಲೇಶಪುರದಲ್ಲಿ ಶುಕ್ರವಾರ ನಡೆದ ಪಕ್ಷದ ಎರಡನೇ ಹಂತದ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.

‘ರಾಜ್ಯದಲ್ಲಿ ಜೆಡಿಎಸ್–ಬಿಎಸ್ಪಿ ಮೈತ್ರಿಯಿಂದ ನಮಗೆ ಲಾಭವೇ ಆಗಲಿದೆ. ಬೇರೆ ಪಕ್ಷಗಳ ಹೊಂದಾಣಿಕೆ ನಮಗೆ ಅಡ್ಡಿಯಾಗದು. ಇಂಥ ಮೈತ್ರಿಗಳನ್ನು ನಾವು ಸಾಕಷ್ಟು ನೋಡಿದ್ದೇವೆ. ನಾವು 150 ಕ್ಷೇತ್ರಗಳಲ್ಲಿ ಗೆಲ್ಲುವ ಗುರಿ ಮುಟ್ಟುತ್ತೇವೆ’ ಎಂದು ಅವರು ಆತ್ಮವಿಶ್ವಾಸ ವ್ಯಕ್ತಪಡಿಸಿದರು.

ADVERTISEMENT

‘ರಾಜ್ಯಕ್ಕೆ ರಾಹುಲ್ ಗಾಂಧಿ ಬಂದರೆ ನಮಗೇ ಲಾಭವಾಗಲಿದೆ. ಅವರು ಹೋದ ಕಡೆಯೆಲ್ಲಾ ನಾನೂ ಹೋಗುವೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.