ಬೆಂಗಳೂರು: ‘ರಾಹುಲ್ ಗಾಂಧಿ ಬಳ್ಳಾರಿ ಜಿಲ್ಲೆಯ ಹೊಸಪೇಟೆಗೆ ಬರುತ್ತಿರುವುದು ಬಿಜೆಪಿಗೆ ಭಾಗ್ಯವೇ ಬಂದಂತಾಗಿದೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಟ್ವಿಟರ್ನಲ್ಲಿ ವ್ಯಂಗ್ಯವಾಗಿ ಪ್ರತಿಕ್ರಿಯಿಸಿದ್ದಾರೆ.
‘ಚುನಾವಣಾ ಪ್ರಚಾರಕ್ಕೆ ಬರುತ್ತಿರುವ ರಾಹುಲ್ ಗಾಂಧಿಗೆ ಆತ್ಮೀಯ ಸ್ವಾಗತ. ಅವರು ಈ ಹಿಂದೆ ಪ್ರಚಾರ ಮಾಡಿದ ಬಹುತೇಕ ಕಡೆ ಕಾಂಗ್ರೆಸ್ಗೆ ಹಿನ್ನಡೆಯಾಗಿ ಬಿಜೆಪಿ ಜಯ ಗಳಿಸಿದೆ’ ಎಂದು ‘ಹ್ಯಾಷ್ ಟ್ಯಾಗ್ ಪರಿವರ್ತನಾ ಯಾತ್ರೆ, ಹ್ಯಾಷ್ ಟ್ಯಾಗ್ ರಾಹುಲ್ಗಾಂಧಿ’(#ParivartanaYatre #RahulGandhi) ಅಡಿಯಲ್ಲಿ ಟ್ವೀಟ್ ಮಾಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.