ADVERTISEMENT

ನ್ಯಾ.ಸದಾಶಿವ ವರದಿ ಶಿಫಾರಸು: ರಾಹುಲ್ ಗಾಂಧಿ ಭರವಸೆ

​ಪ್ರಜಾವಾಣಿ ವಾರ್ತೆ
Published 13 ಫೆಬ್ರುವರಿ 2018, 7:13 IST
Last Updated 13 ಫೆಬ್ರುವರಿ 2018, 7:13 IST
ನ್ಯಾ.ಸದಾಶಿವ ವರದಿ ಶಿಫಾರಸು: ರಾಹುಲ್ ಗಾಂಧಿ ಭರವಸೆ
ನ್ಯಾ.ಸದಾಶಿವ ವರದಿ ಶಿಫಾರಸು: ರಾಹುಲ್ ಗಾಂಧಿ ಭರವಸೆ   

ರಾಯಚೂರು: ನ್ಯಾ.ಸದಾಶಿವ ಆಯೋಗದ ವರದಿ ಜಾರಿಗೆ ರಾಜ್ಯ ಸರ್ಕಾರದಿಂದ ಶಿಫಾರಸು ಕಳುಹಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಿಳಿಸುತ್ತೇನೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಭರವಸೆ ನೀಡಿದರು ಎಂದು ವಿವಿಧ ದಲಿತ ಸಂಘಟನೆಗಳ ಮುಖಂಡರು ತಿಳಿಸಿದರು.

ಜಿಲ್ಲೆಯ ಸಿಂಧನೂರು ನಗರದಲ್ಲಿ ಭಾನುವಾರ ನಡೆದ ಕಪ್ಪು ಬಾವುಟ ಪ್ರದರ್ಶನ ಹಿನ್ನೆಲೆಯಲ್ಲಿ, ದಲಿತ ಮುಖಂಡರನ್ನು ಸರ್ಕಿಟ್ ಹೌಸ್‌ಗೆ ಆಹ್ವಾನಿಸಿ ಸೋಮವಾರ ಬೆಳಿಗ್ಗೆ ರಾಹುಲ್ ಗಾಂಧಿ ಅವರು ಮಾತುಕತೆ ನಡೆಸಿದರು.

ರಾಹುಲ್ ಗಾಂಧಿ ಅವರು ಪ್ರತ್ಯೇಕವಾಗಿ ದಲಿತ ಮುಖಂಡರೊಂದಿಗೆ 10 ನಿಮಿಷ ಮಾತನಾಡಿದರು. ಈ ಭಾರಿ ವಿಧಾನಸಭೆ ಚುನಾವಣೆಯಲ್ಲಿ ಅಸ್ಪೃಶ್ಯ ಜಾತಿಗಳ ಮುಖಂಡರಿಗೆ ಆದ್ಯತೆ ಮೇರೆಗೆ ಟಿಕೆಟ್ ನೀಡುತ್ತೇವೆ ಎನ್ನುವ ಭರವಸೆ ಕೂಡಾ ನೀಡಿದ್ದಾರೆ ಎಂದರು.

ADVERTISEMENT

ದಲಿತ ಮುಖಂಡರಾದ ಅಂಬಣ್ಣ ಅರೋಲಿಕರ, ರವೀಂದ್ರ ಪಟ್ಟಿ ಮತ್ತಿತರರು ಮಾತುಕತೆಗೆ ಹೋಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.